Select Your Language

Notifications

webdunia
webdunia
webdunia
webdunia

ವಾಯುಭಾರ ಕುಸಿತದ ಮುಂದುವರೆದ ಎಫೆಕ್ಟ್: ಇಂದು ಮತ್ತು ನಾಳೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ವಾಯುಭಾರ ಕುಸಿತದ ಮುಂದುವರೆದ ಎಫೆಕ್ಟ್: ಇಂದು ಮತ್ತು ನಾಳೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
bangalore , ಶನಿವಾರ, 16 ಅಕ್ಟೋಬರ್ 2021 (21:17 IST)
ಬೆಂಗಳೂರು: ಕರ್ನಾಟಕ ರಾಜ್ಯ  ಮಳೆ ನರ್ತನವಾಡುತ್ತಿದ್ದು ಅಲರ್ಟ್​ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 
 
ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 17 ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 
 
ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
 
ಹೆಚ್.ಎಸ್.ಆರ್ ಲೇಔಟ್ ಜಲಾವೃತ: 
 
ವಾಯುಭಾರ ಕುಸಿತದ ಎಫೆಕ್ಟ್​ನಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ನಿನ್ನೆ ಸಂಜೆ ಕೂಡ ರಾಜಧಾನಿಯಲ್ಲಿ  ಧಾರಾಕಾರ ಮಳೆ ಸುರಿದಿತ್ತು. ವರುಣನ ಆರ್ಭಟಕ್ಕೆ ನಗರದ ಪ್ರತಿಷ್ಠಿತ ಹೆಚ್.ಎಸ್.ಆರ್ ಲೇಔಟ್  ತತ್ತರಿಸಿದೆ. ಚರಂಡಿಗಳು ತುಂಬಿ ಮನೆಗಳಿಗೆ ಮಳೆ ನೀರು ನುಗ್ಗಿದೆ ಎಂದು ವರದಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

1-5ರ ತರಗತಿವರೆಗೆ ಶಾಲೆ ಆರಂಭದ ಬಗ್ಗೆ ಚರ್ಚೆ