Publish Date: Sun, 13 Jan 2019 (18:09 IST)
Updated Date: Sun, 13 Jan 2019 (18:12 IST)
ಆನೆಗಳ ಗುಂಪು ಎರಡು ಗುಂಪುಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.
ಆನೇಕಲ್ ಗಡಿ ಭಾಗದ ತಮಿಳುನಾಡಿನ ಬಿರ್ಜೆಪಲ್ಲಿ ಗ್ರಾಮದ ಬಳಿ ಆನೆಗಳು ಕಾಣಿಸಿಕೊಂಡಿವೆ. ಇಡೀ ರಾತ್ರಿ ಗ್ರಾಮದ ಪಕ್ಕದಲ್ಲೇ ಬೀಡು ಬಿಟ್ಟಿದ್ದ ಆನೆಗಳಿಂದ ಅಲ್ಲಿನ ಜನರು ನಿದ್ದೆ ಬಿಡುವಂತಾಗಿದೆ.
ಸುತ್ತ ಮುತ್ತಲ ಹೊಲಗಳಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಗ್ರಾಮಸ್ಥರು ಹಾಗು ಅರಣ್ಯ ಸಿಬ್ಬಂದಿಯಿಂದ ಕಾಡಾನೆಗಳನ್ನು ಓಡಿಸುವ ಯತ್ನ ಮುಂದುವರಿದಿದೆ. ಆದರೆ ಗ್ರಾಮಸ್ಥರ ಮೇಲೆ ಆನೆಗಳು ತಿರುಗಿ ಬೀಳುತ್ತಿವೆ. ಗ್ರಾಮದ ಯುವಕನ ಮೇಲೆ ಆನೆಯೊಂದು ದಾಳಿ ನಡೆಸಿದ್ದು, ಕೂದಲು ಎಳೆ ಅಂತರದಲ್ಲಿ ಯುವಕ ಪಾರಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಮುಂದುವರಿದಿದೆ.
ಅರಣ್ಯ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದು ಗ್ರಾಮಸ್ಥರು ಪ್ರತಿಭಟನೆ ಹಾದಿ ತುಳಿದಿದ್ದಾರೆ. ಆನೆಗಳು ಕಾಡಿನಿಂದ ನಾಡಿಗೆ ಬರದಂತೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.