Webdunia - Bharat's app for daily news and videos

Install App

ಮುಂದುವರಿದ ಆನೆಗಳ ಹಾವಳಿ!

Webdunia
ಭಾನುವಾರ, 13 ಜನವರಿ 2019 (18:09 IST)
ಆನೆಗಳ ಗುಂಪು ಎರಡು ಗುಂಪುಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.

ಆನೇಕಲ್ ಗಡಿ ಭಾಗದ ತಮಿಳುನಾಡಿನ ಬಿರ್ಜೆಪಲ್ಲಿ ಗ್ರಾಮದ ಬಳಿ ಆನೆಗಳು ಕಾಣಿಸಿಕೊಂಡಿವೆ. ಇಡೀ ರಾತ್ರಿ  ಗ್ರಾಮದ ಪಕ್ಕದಲ್ಲೇ ಬೀಡು ಬಿಟ್ಟಿದ್ದ ಆನೆಗಳಿಂದ ಅಲ್ಲಿನ ಜನರು ನಿದ್ದೆ ಬಿಡುವಂತಾಗಿದೆ.

ಸುತ್ತ ಮುತ್ತಲ ಹೊಲಗಳಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಗ್ರಾಮಸ್ಥರು ಹಾಗು ಅರಣ್ಯ ಸಿಬ್ಬಂದಿಯಿಂದ ಕಾಡಾನೆಗಳನ್ನು ಓಡಿಸುವ ಯತ್ನ ಮುಂದುವರಿದಿದೆ. ಆದರೆ ಗ್ರಾಮಸ್ಥರ ಮೇಲೆ ಆನೆಗಳು ತಿರುಗಿ ಬೀಳುತ್ತಿವೆ. ಗ್ರಾಮದ ಯುವಕನ ಮೇಲೆ ಆನೆಯೊಂದು ದಾಳಿ ನಡೆಸಿದ್ದು, ಕೂದಲು ಎಳೆ ಅಂತರದಲ್ಲಿ ಯುವಕ ಪಾರಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಮುಂದುವರಿದಿದೆ.

ಅರಣ್ಯ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದು  ಗ್ರಾಮಸ್ಥರು ಪ್ರತಿಭಟನೆ ಹಾದಿ ತುಳಿದಿದ್ದಾರೆ. ಆನೆಗಳು ಕಾಡಿನಿಂದ ನಾಡಿಗೆ ಬರದಂತೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments