Webdunia - Bharat's app for daily news and videos

Install App

ಮುಂದುವರಿದ ಆನೆಗಳ ಹಾವಳಿ!

Webdunia
ಭಾನುವಾರ, 13 ಜನವರಿ 2019 (18:09 IST)
ಆನೆಗಳ ಗುಂಪು ಎರಡು ಗುಂಪುಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿವೆ.

ಆನೇಕಲ್ ಗಡಿ ಭಾಗದ ತಮಿಳುನಾಡಿನ ಬಿರ್ಜೆಪಲ್ಲಿ ಗ್ರಾಮದ ಬಳಿ ಆನೆಗಳು ಕಾಣಿಸಿಕೊಂಡಿವೆ. ಇಡೀ ರಾತ್ರಿ  ಗ್ರಾಮದ ಪಕ್ಕದಲ್ಲೇ ಬೀಡು ಬಿಟ್ಟಿದ್ದ ಆನೆಗಳಿಂದ ಅಲ್ಲಿನ ಜನರು ನಿದ್ದೆ ಬಿಡುವಂತಾಗಿದೆ.

ಸುತ್ತ ಮುತ್ತಲ ಹೊಲಗಳಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಗ್ರಾಮಸ್ಥರು ಹಾಗು ಅರಣ್ಯ ಸಿಬ್ಬಂದಿಯಿಂದ ಕಾಡಾನೆಗಳನ್ನು ಓಡಿಸುವ ಯತ್ನ ಮುಂದುವರಿದಿದೆ. ಆದರೆ ಗ್ರಾಮಸ್ಥರ ಮೇಲೆ ಆನೆಗಳು ತಿರುಗಿ ಬೀಳುತ್ತಿವೆ. ಗ್ರಾಮದ ಯುವಕನ ಮೇಲೆ ಆನೆಯೊಂದು ದಾಳಿ ನಡೆಸಿದ್ದು, ಕೂದಲು ಎಳೆ ಅಂತರದಲ್ಲಿ ಯುವಕ ಪಾರಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಮುಂದುವರಿದಿದೆ.

ಅರಣ್ಯ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದು  ಗ್ರಾಮಸ್ಥರು ಪ್ರತಿಭಟನೆ ಹಾದಿ ತುಳಿದಿದ್ದಾರೆ. ಆನೆಗಳು ಕಾಡಿನಿಂದ ನಾಡಿಗೆ ಬರದಂತೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments