Webdunia - Bharat's app for daily news and videos

Install App

ಚಿರತೆಗಾಗಿ ಮುಂದುವರೆದ ಶೋಧಕಾರ್ಯ

Webdunia
ಭಾನುವಾರ, 28 ಆಗಸ್ಟ್ 2022 (17:08 IST)
ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ 24ನೇ ದಿನಕ್ಕೆ ಚಿರತೆ ಸೆರೆ ಕಾರ್ಯಾಚರಣೆ‌ ಕಾಲಿಟ್ಟಿದೆ. ಐದನೇ ದಿನವೂ ಆನೆ, ಜೆಸಿಬಿಗಳ ಕಾರ್ಯಾಚರಣೆ ಮುಂದುವರೆದಿದೆ. ಇಂದು ಕೂಡ ನೂರು ಜನ ಸಿಬ್ಬಂದಿ, ಜೆಸಿಬಿ ಆನೆಗಳಿಂದ ಚಿರತೆ ಸೆರೆಗೆ ಪ್ಲ್ಯಾನ್ ಮಾಡಿದ್ದು, ಪ್ರತಿ ದಿನ 250 ಎಕರೆ ಪ್ರದೇಶ, ಏಳು ಕಿಮೀ ಸುತ್ತಿದ್ರೂ ಚಿರತೆ ಸಿಗುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸಿ ಚಾಲಾಕಿ ಚಿರತೆ ಓಡಾಡುತ್ತಿದೆ. ಚಿರತೆ ಸೆರೆಯಾಗದಕ್ಕೆ ಬೆಳಗಾವಿ ನಗರ ಜನರ ಭಯ ಭೀತಿ ದೂರವಾಗಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಇಂದಿಗೆ 24 ದಿನಗಳಾಗಿವೆ. ಮೈದಾನದಲ್ಲಿ ಓಡಾಡಿ ಕಾಣೆಯಾದ ಚಿರತೆ ಇದುವರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳ ಕಣ್ಣಿಗೆ ಬಿದ್ದಿಲ್ಲ. ನಿರಂತರ ಕಾರ್ಯಾಚರಣೆ ಕೈಗೊಳ್ಳುತ್ತಿರುವ ಸಿಬ್ಬಂದಿಗಳು ಇದೀಗ ಮಾಸ್ಟರ್ ಪ್ಲಾನ್​ನೊಂದಿಗೆ ಸೆರೆ ಹಿಡಿಯುವ ಪ್ರಯತ್ನವನ್ನು ನಡೆಸಲಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕೋಬಿಂಗ್ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕೋಬಿಂಗ್ ಕಾರ್ಯಾಚರಣೆ ಎಂದರೆ ಬಲೆ ಹಾಕಿ ಕಾರ್ಯಾಚರಣೆ ನಡೆಸುವುದಾಗಿದೆ. ಅಂದರೆ, ಒಂದು ಕಡೆಯಲ್ಲಿ ಬಲೆಯನ್ನು ಹಾಕಿ ಇನ್ನೊಂದು ಕಡೆಯಿಂದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿ ಚಿರತೆಯನ್ನು ಬಲೆಗೆ ಹಾಕುವ ಪ್ಲಾನ್​ನ್ನು ರೂಪಿಸಿಕೊಂಡಿದ್ದಾರೆ. ಈಗಾಗಲೇ ಗಾಲ್ಫ್ ಮೈದಾನದ ತಡೆಗೋಡೆ ಸುತ್ತ ಸುಮಾರು ಮೂರು ಕಿ.ಮೀ. ವರೆಗೆ ಬಲೆಯನ್ನು ಹಾಕಲಾಗಿದೆ. ಹನುಮಾನ್ ನಗರ, ಜಾಧವ್ ನಗರ ಭಾಗದ ಕಡೆಗಳಲ್ಲಿ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಬಲೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments