ಚಿರತೆಗಾಗಿ ಮುಂದುವರೆದ ಶೋಧಕಾರ್ಯ

Webdunia
ಭಾನುವಾರ, 28 ಆಗಸ್ಟ್ 2022 (17:08 IST)
ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ 24ನೇ ದಿನಕ್ಕೆ ಚಿರತೆ ಸೆರೆ ಕಾರ್ಯಾಚರಣೆ‌ ಕಾಲಿಟ್ಟಿದೆ. ಐದನೇ ದಿನವೂ ಆನೆ, ಜೆಸಿಬಿಗಳ ಕಾರ್ಯಾಚರಣೆ ಮುಂದುವರೆದಿದೆ. ಇಂದು ಕೂಡ ನೂರು ಜನ ಸಿಬ್ಬಂದಿ, ಜೆಸಿಬಿ ಆನೆಗಳಿಂದ ಚಿರತೆ ಸೆರೆಗೆ ಪ್ಲ್ಯಾನ್ ಮಾಡಿದ್ದು, ಪ್ರತಿ ದಿನ 250 ಎಕರೆ ಪ್ರದೇಶ, ಏಳು ಕಿಮೀ ಸುತ್ತಿದ್ರೂ ಚಿರತೆ ಸಿಗುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸಿ ಚಾಲಾಕಿ ಚಿರತೆ ಓಡಾಡುತ್ತಿದೆ. ಚಿರತೆ ಸೆರೆಯಾಗದಕ್ಕೆ ಬೆಳಗಾವಿ ನಗರ ಜನರ ಭಯ ಭೀತಿ ದೂರವಾಗಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಇಂದಿಗೆ 24 ದಿನಗಳಾಗಿವೆ. ಮೈದಾನದಲ್ಲಿ ಓಡಾಡಿ ಕಾಣೆಯಾದ ಚಿರತೆ ಇದುವರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳ ಕಣ್ಣಿಗೆ ಬಿದ್ದಿಲ್ಲ. ನಿರಂತರ ಕಾರ್ಯಾಚರಣೆ ಕೈಗೊಳ್ಳುತ್ತಿರುವ ಸಿಬ್ಬಂದಿಗಳು ಇದೀಗ ಮಾಸ್ಟರ್ ಪ್ಲಾನ್​ನೊಂದಿಗೆ ಸೆರೆ ಹಿಡಿಯುವ ಪ್ರಯತ್ನವನ್ನು ನಡೆಸಲಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕೋಬಿಂಗ್ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕೋಬಿಂಗ್ ಕಾರ್ಯಾಚರಣೆ ಎಂದರೆ ಬಲೆ ಹಾಕಿ ಕಾರ್ಯಾಚರಣೆ ನಡೆಸುವುದಾಗಿದೆ. ಅಂದರೆ, ಒಂದು ಕಡೆಯಲ್ಲಿ ಬಲೆಯನ್ನು ಹಾಕಿ ಇನ್ನೊಂದು ಕಡೆಯಿಂದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿ ಚಿರತೆಯನ್ನು ಬಲೆಗೆ ಹಾಕುವ ಪ್ಲಾನ್​ನ್ನು ರೂಪಿಸಿಕೊಂಡಿದ್ದಾರೆ. ಈಗಾಗಲೇ ಗಾಲ್ಫ್ ಮೈದಾನದ ತಡೆಗೋಡೆ ಸುತ್ತ ಸುಮಾರು ಮೂರು ಕಿ.ಮೀ. ವರೆಗೆ ಬಲೆಯನ್ನು ಹಾಕಲಾಗಿದೆ. ಹನುಮಾನ್ ನಗರ, ಜಾಧವ್ ನಗರ ಭಾಗದ ಕಡೆಗಳಲ್ಲಿ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಬಲೆ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments