Webdunia - Bharat's app for daily news and videos

Install App

4 ನೇ ದಿನಕ್ಕೆ ಮುಂದುವರಿದ ಹುಲಿ ಕಾರ್ಯಾಚರಣೆ

Webdunia
ಸೋಮವಾರ, 4 ಫೆಬ್ರವರಿ 2019 (19:16 IST)
ಜನರ ನೆಮ್ಮದಿ ಕೆಡಿಸಿದ್ದಲ್ಲದೇ ಅರಣ್ಯ ಇಲಾಖೆ ಸಿಬ್ಬಂದಿಯ ಕೈಗೆ ಗಾಯ ಮಾಡಿದ್ದ ಹುಲಿಯನ್ನು ಹಿಡಿಯುವ ಕಾರ್ಯಾಚರಣೆ 4ನೇ ದಿನವೂ ಮುಂದುವರಿದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲ್ಲೀಗೌಡನಹಳ್ಳಿಯ ಸುತ್ತಮುತ್ತ ಕಳೆದ ಎರಡು ಮೂರು ದಿನಗಳಿಂದ ಕಾಡಂಚಿನ ಗ್ರಾಮದಲ್ಲಿ ಹುಲಿಯೊಂದು ಕಾಣಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿತ್ತು.  ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ದಾಳಿ ಮಾಡಿ  ಕೈಗೆ ಗಾಯಮಾಡಿತ್ತು.

ಇದಾದ ನಂತರ ಅರಣ್ಯ ಇಲಾಖೆಯು ಸಹ ಕಾರ್ಯಚರಣೆ ಮಾಡಿ ಶನಿವಾರ ಸಂಜೆ ಹುಲಿಯನ್ನ ಕಾಡಿಗೆ ಅಟ್ಟಲಾಗಿತ್ತು. ಆದರೆ ಭಾನುವಾರ ಮತ್ತೆ ಹುಲಿರಾಯ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಹಾಗೂ ಸೋಮವಾರ ಬಂಡೀಪುರದ ಆನೆ  ಜಯಪ್ರಕಾಶ್, ನಾಗರಹೊಳೆಯ ಆನೆ ಅಭಿಮನ್ಯು, ಕೃಷ್ಣ ಎಂಬ ಮೂರು ಆನೆಗಳನ್ನು ಬಳಸಿಕೊಂಡು ಹುಲಿ ಕಾರ್ಯಚರಣೆಯನ್ನು ಕೈಗೊಳ್ಳಲಾಗಿದೆ.  ನಾಲ್ಕನೇ  ದಿನವೂ ಹುಲಿ ಸಿಗದೆ ಅರಣ್ಯ ಇಲಾಖೆಯ ಸಿಬ್ಬಂದಿ ವಾಪಸ್ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments