Webdunia - Bharat's app for daily news and videos

Install App

ಗುಡ್ಡ ಕುಸಿತ ಮುಂದುವರಿಕೆ: ಜನ ತತ್ತರ

Webdunia
ಸೋಮವಾರ, 27 ಆಗಸ್ಟ್ 2018 (20:15 IST)
ಈ ವರ್ಷ ಮಳೆರಾಯ ಮಲೆನಾಡಿಗರನ್ನು ಬೆಂಬಿಡದೆ ಕಾಡತೊಡಗಿದ್ದಾನೆ. ವರುಣನ ಆರ್ಭಟಕ್ಕೆ ಮತ್ತೆ ಮತ್ತೆ ಅವಘಡಗಳು ಮರುಕಳಿಸುತ್ತಿವೆ.

ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಸುರಿದ ಮಹಾಮಳೆಗೆ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.  ಇನ್ನೇನು ಮಳೆ ಕಡಿಮೆಯಾಯಿತು, ಜೀವನ ಸರಿ ಹೋಗುತ್ತದೆ ಎನ್ನುವಷ್ಟರಲ್ಲಿ  ಅವಘಡಗಳು ಮತ್ತೆ ಮತ್ತೆ ಮರುಕಳಿಸುತ್ತಿವೆ.
ಮಳೆ ನಿಂತರೂ ಸಕಲೇಶಪುರ ತಾಲ್ಲೂಕಿನಲ್ಲಿ ಗುಡ್ಡ ಕುಸಿತ ನಿಲ್ಲದಾಗಿದೆ.  ಮತ್ತೆ ರೈಲು ಹಳಿಯ ‌ಮೇಲೆ ಗುಡ್ಡ ಕುಸಿತವಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಡಕುಮರಿಯ 72ನೇ ಮೈಲಿ ಬಳಿ ಮತ್ತೆ ಗುಡ್ಡ ಕುಸಿತವಾಗಿದೆ. ಕಳೆದ ಕೆಲ ದಿನಗಳಿಂದ ಗುಡ್ಡ ಕುಸಿದು ರೈಲು ಸಂಚಾರ ಬಂದ್ ಆಗಿತ್ತು. ಇನ್ನೇನು ತೆರವು ಕಾರ್ಯ ಪೂರ್ಣವಾಗಿ ರೈಲು ಸಂಚಾರ ಮತ್ತೆ ಆರಂಭವಾಗುತ್ತದೆ ಎನ್ನುವಷ್ಟರಲ್ಲಿ ಮತ್ತೆ ಗುಡ್ಡ ಕುಸಿದಿರುವುದರಿಂದ ರೈಲು ಇಲಾಖೆಗೆ ತಲೆ ನೋವಾಗಿ‌ ಪರಿಣಮಿಸಿದೆ. ಯಡಕುಮರಿಯಲ್ಲಿ ಪದೇ ಪದೆ ಗುಡ್ಡ ಕುಸಿಯುತ್ತಿದ್ದು, ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ದೌಡಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments