Webdunia - Bharat's app for daily news and videos

Install App

ಮಹಿಳಾ ಸಹೋದ್ಯೋಗಿ ಮೇಲೆ ಗುತ್ತಿಗೆ ನೌಕರನಿಂದ ಹಲ್ಲೆ

Webdunia
ಮಂಗಳವಾರ, 13 ಜೂನ್ 2017 (11:09 IST)
ರಾಯಚೂರು: ರಾಯಚೂರಿನ ಸಿಂಧನೂರು ನಗರ ಪಾಲಿಕೆಯಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಸಹೋದ್ಯೋಗಿಯೊಬ್ಬರು ಕ್ರೂರವಾಗಿ ಹೊಡೆಯುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
 
ಶರಣಪ್ಪ ಎಂಬವರು ನಸ್ರೀನ್ ಎಂಬುವವರಿಗೆ ತಡವಾಗಿ ಕಚೇರಿಗೆ ಕೆಲಸಕ್ಕೆ ಬಂದದ್ದಕ್ಕೆ ಹೊಡೆದಿದ್ದಾರೆ. ಸಿಂಧನೂರು ನಗರ ಪಾಲಿಕೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ನಸ್ರೀನ್, ರಂಜಾನ್ ತಿಂಗಳಾಗಿರುವುದರಿಂದ ಈಗ ಉಪವಾಸದಲ್ಲಿದ್ದಾರೆ. ರಂಜಾನ್ ಆಗಿದ್ದರಿಂದ ಬೆಳಗ್ಗೆ ಕೆಲಸಕ್ಕೆ ಬರುವುದು ತಡವಾಗಿತ್ತು. ಅಂದು ಶನಿವಾರವಾಗಿದ್ದರಿಂದ ಕಚೇರಿ ಕೆಲಸಗಳನ್ನು ಮುಗಿಸಲು ಕಡಿಮೆ ನೌಕರರು ಕಚೇರಿಯಲ್ಲಿದ್ದರು.  ಗುತ್ತಿಗೆ ಕೆಲಸ ಮಾಡುತ್ತಿರುವ ಕಂಪ್ಯೂಟರ್ ನಿರ್ವಾಹಕರಾಗಿರುವ ಶರಣಪ್ಪ ನಸ್ರೀನ್ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಕೆಲ ನಿಮಿಷಗಳು ಕಳೆದ ನಂತರ ಆತ ನಸ್ರೀನ್ ರನ್ನು ಕಾಲಿನಿಂದ ಒದೆದಿದ್ದಾರೆ. ಇದು ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
 
ಶರಣಪ್ಪನ ಕೃತ್ಯದಿಂದ ನೊಂದ ಮಹಿಳೆ ನಸ್ರೀನ್ ಪೊಲೀಸರಿಗೆ ದೂರು ನೀಡಿದ್ದಾರೆ.ನಂತರ ಶರಣಪ್ಪನನ್ನು ಕೆಲಸದಿಂದ ವಜಾ ಮಾಡಿ ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments