Webdunia - Bharat's app for daily news and videos

Install App

ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ

Webdunia
ಗುರುವಾರ, 6 ಜುಲೈ 2023 (13:37 IST)
ಬೆಂಗಳೂರು : ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಮೀಷನ್ ಬಾಂಬ್ ಹಾಕಿದ್ದ ಗುತ್ತಿಗೆದಾರರ ಸಂಘ ಇದೀಗ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ತಿರುಗಿಬೀಳುವ ಮುನ್ಸೂಚನೆ ನೀಡಿದೆ.

ಜುಲೈ 15ರೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುವುದಾಗಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾಮಗಾರಿಗಳ ಬಿಲ್ ತಡೆಹಿಡಿಯಲಾಗಿತ್ತು. 

ಕಳೆದ ವಾರ ರಾಜ್ಯ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಬಾಕಿ ಬಿಡುಗಡೆಗೆ ಒತ್ತಾಯಿಸಿತ್ತು. ಸಂಘದ ಮನವಿಯನ್ನು ಪುರಸ್ಕರಿಸಿದ ಸರ್ಕಾರ ಪೆಂಡಿಂಗ್ ಬಿಲ್ಗಳ ಬಿಡುಗಡೆಗೆ ಜೂನ್ 28 ರಂದು ಸುತ್ತೋಲೆ ಕೂಡ ಹೊರಡಿಸಿತ್ತು. ಆದರೆ ಈ ಆದೇಶ ಹೊರಡಿಸಿ ಒಂದು ವಾರ ಕಳೆದರೂ ಹಣ ಮಾತ್ರ ಬಿಡುಗಡೆ ಮಾಡಿಲ್ಲ.

ಸರ್ಕಾರದ ಆದೇಶ ಬರೀ ಸುತ್ತೋಲೆಗಷ್ಟೇ ಸೀಮಿತವಾಗಿದೆ. ಮೊದಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಗುತ್ತಿಗೆದಾರರು ಸರ್ಕಾರದ ನಡೆಯಿಂದ ಕಂಗಾಲಾಗಿದ್ದಾರೆ. ಜುಲೈ 15ರೊಳಗೆ ಹಣ ರಿಲೀಸ್ ಮಾಡದಿದಿದ್ದರೆ ಪ್ರತಿಭಟನೆಯ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ತೊಳೆಯಲು ಎಂಪಿ ಸಾಹೇಬ್ರಿಗೆ ಅಗ್ನಿ ಶಾಮಕ ದಳದವರೇ ಬೇಕು: ಸಂಸದ ಎಂದ ಮಾತ್ರಕ್ಕೆ ಇಂಥಾ ದರ್ಬಾರಾ Video

ಸಾವಿರಾರು ಕೋಟಿ ಒಡೆಯರಾದರೂ ಮೊಮ್ಮಕ್ಕಳಿಗೆ ಎಂಥಾ ಸಂಸ್ಕಾರ ಕಲಿಸಿದ್ದಾರೆ ಅಂಬಾನಿ ಫ್ಯಾಮಿಲಿ ನೋಡಿ Video

ಆಸ್ಪತ್ರೆಯೊಳಗೆ ನುಗ್ಗಿದ ಬೀದಿನಾಯಿ, ಚಿನ್ನ, ಹಣವಿದ್ದ ಬ್ಯಾಗ್ ಎತ್ತಿ ಪರಾರಿ: ವೈರಲ್ ಆಯ್ತು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸೂಚನೆ

ಮುಂದಿನ ಸುದ್ದಿ
Show comments