Webdunia - Bharat's app for daily news and videos

Install App

ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ

Webdunia
ಗುರುವಾರ, 15 ಜೂನ್ 2023 (08:12 IST)
ಬೆಂಗಳೂರು : ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಪಾಲ್ಗೊಂಡ ವಿಚಾರವಾಗಿ ಬಿಜೆಪಿ ರಾಜಭವನದ ಕದ ತಟ್ಟಿದೆ.
 
ಈ ವಿವಾದ ಸೃಷ್ಟಿಯಾಗುತ್ತಿದ್ದಂತೆ ಕೈ ನಾಯಕರು ಒಬ್ಬೊಬ್ಬರು ಒಂದೊಂದು ಸ್ಪಷ್ಟನೆ ಕೊಡುತ್ತಿದ್ದಾರೆ. ವಿಪಕ್ಷಗಳು ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿಯೂ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೇ ತಿಂಗಳಲ್ಲಿ ಗಂಭೀರ ವಿವಾದವೊಂದನ್ನು ಈ ಮೂಲಕ ಮೈಮೇಲೆ ಎಳೆದುಕೊಂಡಿದೆ. ಮಂಗಳವಾರ ಸುರ್ಜೇವಾಲಾ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವಿಚಾರ ಬಿಜೆಪಿ, ಜೆಡಿಎಸ್ಗೆ ಈಗ ಭರ್ಜರಿ ಆಹಾರವಾಗಿದೆ.

ಸರ್ಕಾರದ ಸಭೆಯಲ್ಲಿ ಸುರ್ಜೇವಾಲ ಭಾಗವಹಿಸಿರುವುದೇಕೆ? ಇದು ಹೈಕಮಾಂಡ್ ಹಂಗಿನ ಸರ್ಕಾರವೇ ಎಂದು ಕಾಂಗ್ರೆಸ್ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕಾಗಲಿ, ಬಿಬಿಎಂಪಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಸುರ್ಜೇವಾಲ ಅವರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಂದಿಗೆ ಏನು ಕೆಲಸ ಎಂದು ವಿಪಕ್ಷಗಳು ಹರಿಹಾಯ್ದಿವೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಡೆಸಿದ ಸಭೆಗೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಡಾ ಕೇಸ್ ನಲ್ಲಿ ಸುಪ್ರೀಂಕೋರ್ಟ್ ರಿಲೀಫ್ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಫುಲ್ ಖುಷ್

ಹೈದರಾಬಾದ್‌ನ ವಿಮಾನ ದುರಂತದಂತೆ ಬಾಂಗ್ಲಾದೇಶದಲ್ಲೂ ಕಾಲೇಜಿಗೆ ಅಪ್ಪಳಿಸಿದ ಎಫ್ 7 ಯುದ್ಧ ವಿಮಾನ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments