Publish Date: Sun, 21 Aug 2022 (18:04 IST)
Updated Date: Sun, 21 Aug 2022 (18:19 IST)
ನಾಟಿ ಕೋಳಿ ಸಾರು ತಿಂದು ದೇಗುಲಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ ಎನ್ನಲಾಗುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಾಗಾಗಿ ಕೊಡಗಿನಲ್ಲಿ ಮತ್ತೊಂದು ವಿವಾದಕ್ಕೆ ಸಿದ್ದರಾಮಯ್ಯ ಸಿಲುಕಿದರಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಮಡಿಕೇರಿಯ ಅತಿಥಿ ಗೃಹದಲ್ಲಿ ಮಧ್ಯಾಹ್ನ ಕೋಳಿ ಸಾರು ಸವಿದಿದ್ದ ಸಿದ್ದರಾಮಯ್ಯ, ಮಧ್ಯಾಹ್ನದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಮಾಂಸ ತಿಂದು ದೇಗುಲಕ್ಕೆ ತೆರಳಿದ್ದಾರೆ ಎನ್ನಲಾದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.