Webdunia - Bharat's app for daily news and videos

Install App

ತಂಪಾದ ಬೆಂಗಳೂರು: ರಾಜಧಾನಿಯ ಹಲವೆಡೆ ಮಳೆರಾಯನ ಸಿಂಚನ

Sampriya
ಶನಿವಾರ, 20 ಏಪ್ರಿಲ್ 2024 (16:23 IST)
ಬೆಂಗಳೂರು:  ಬಿಸಿಲ ತಾಪಕ್ಕೆ ಸುಸ್ತಾಗಿದ್ದ ರಾಜ್ಯ ರಾಜಧಾನಿ ಜನತೆಗೆ ಇಂದು ವರುಣ ತಂಪೆರೆದಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು  3 ಗಂಟೆ ವೇಳೆಗೆ ನಗರದ ಹಲವರಡೆ ಗುಡುಗು ಸಹಿತ ಮಳೆಯಾಗಿರುವ ವರದಿಯಾಗಿದೆ.

ಬೆಂಗಳೂರು ನಗರದ ವೈಟ್‌ಫೀಲ್ಡ್, ವರ್ತೂರು, ಸರ್ಜಾಪುರ ರಸ್ತೆ, ಮಾರತ್ತಹಳ್ಳಿ ಹಾಗೂ ಸುತ್ತಮುತ್ತ, ವೈಟ್‌ಫೀಲ್ಡ್, ಮಾರತ್ತಹಳ್ಳಿ, ಬೆಳ್ಳಂದೂರು, ಬೊಮ್ಮನಹಳ್ಳಿಯಲ್ಲಿ ತುಂತುರು ಮಳೆಯಾಗಿದೆ.

ಅಷ್ಟೇ ಅಲ್ಲದೆ ಬಿಟಿಎಂ ಲೇಔಟ್, ಜಯನಗರ, ಕೋರಮಂಗಲ, ಜಯನಗರ, ಜೆ.ಪಿ.ನಗರ, ಎಚ್‌ಎಸ್‌ಆರ್ ಲೇಔಟ್, ಬನಶಂಕರಿ, ಉತ್ತರಹಳ್ಳಿ, ಆರ್‌ ಟಿ ನಗರ, ರಾಜರಾಜೇಶ್ವರಿ ನಗರದಲ್ಲಿ ತುಂತುರು ಮಳೆಯಾಗುತ್ತಿದೆ.

ಸದ್ಯ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆಯೂ ಮಳೆಯಾಗುವ ಮುನ್ಸೂಚನೆಯಿದೆ. ಇನ್ನೂ ಮಾರ್ಚ್‌ ಆರಂಭದಲ್ಲೇ ರಾಜ್ಯದಲ್ಲಿ  ಬಿಸಿಲ ತಾಪಕ್ಕೆ ಜನರು ಸುಸ್ತಾಗಿದ್ದರು. ಮನೆಯಿಂದ ಹೊರ ಬರಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದಲ್ಲದೆ ವರುಣನ ಆಗಮನಕ್ಕೆ ರಾಜ್ಯದಾದ್ಯಂತ ಜನ ಕಾಯುತ್ತಿದ್ದರು.  ಒಂದು ವಾರದ ಹಿಂದೆಯೇ ಹವಾಮಾನ ಇಲಾಖೆ ಏಪ್ರಿಲ್‌ 18ರ ಬಳಿಕ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದ್ದು, ಈ ಭವಿಷ್ಯ ಇದೀಗ ನಿಜವಾಗುತ್ತಾ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments