Webdunia - Bharat's app for daily news and videos

Install App

ಸರ್ಕಾರದ ಜೊತೆ ಸಹಕರಿಸಿ,ಇಲ್ಲವಾದಲ್ಲಿ ಲಾಕ್‌ಡೌನ್:ಆರಗ ಜ್ಞಾನೇಂದ್ರ

Webdunia
ಮಂಗಳವಾರ, 4 ಜನವರಿ 2022 (18:05 IST)
ಕೋವಿಡ್ ಎರಡನೇ ಅಲೆಯಲ್ಲಿ ಸಂಭವಿಸಿದಂತೆ ಮತ್ತೆ ಸಾವು ನೋವುಗಳು ಆಗಬಾರದು. ಈ ಮಾಡಲು ಸಾರ್ವಜನಿಕರು ಸರ್ಕಾರದ ಜೊತೆಗೆ ಸಹಕಾರ. ಇಲ್ಲವಾದಲ್ಲಿ ಲಾಕ್‌ಡೌನ್ ಜಾರಿ ಮಾಡುವುದು ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿದೆ. ಈ ವಿಚಾರದಲ್ಲಿ ಎಲ್ಲರೂ ಯೋಚಿಸುವ ಅಗತ್ಯವಿದೆ. ಮಾಸ್ಕ್ಗಳಿಲ್ಲದೆ ತಿರುಗಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಸೇರುತ್ತಿದ್ದಾರೆ ಇದಕ್ಕೆ ಜನರು ಕಡಿವಾಣ ಹಾಕಬೇಕು.
ಜನರ ಜೀವ ಉಳಿಸುವ ಸಲುವಾಗಿ ಆರ್ಥಿಕ ಅಭಿವೃದ್ಧಿಯನ್ನು ತ್ಯಾಗಮಾಡಬೇಕಾಗಿ ಬರುತ್ತದೆ. ಶಾಲಾ ಕಾಲೇಜುಗಳಿಗೆ ಬಂದ್ ಇದೆಲ್ಲದನ್ನೂ ತಪ್ಪಿಸಬೇಕು ಎನ್ನುವುದಾದರೆ ಸಾರ್ವಜನಿಕರು ಸಹಕಾರ ನೀಡಬೇಕು.
ಸಧ್ಯಕ್ಕೆ ಲಾಕ್‌ಡೌನ್ ಆಲೋಚನೆ ಇಲ್ಲವಾದರೂ ಸಭೆ ಸೇರಿ ಸಮಾಲೋಚನೆ ನಡೆಸುತ್ತಿದೆ. ಬೆಂಗಳೂರಿನಲ್ಲೇ ನಿನ್ನೆ ಸೋಂಕಿತರ ಸಂಖ್ಯೆ ೯೦೦ರ ಗಡಿ ದಾಟಿದೆ. ಮುಂದೇನೆಂಬುದು ಗೊತ್ತಿಲ್ಲ ಎಂದರು.
ಸಧ್ಯಕ್ಕೆ ನೈಟ್ ಕರ್ಫ್ಯು ಮುಂದುವರಿಯಲಿದೆ. ಮುಖ್ಯಮಂತ್ರಿಗಳು ಸಹ ಇದನ್ನು ಹೇಳಿದ್ದಾರೆ. ಜನ ಜಾಗೃತಿ ಮೂಡಿಸುವುದು ಸಹ ಇದರ ಉದ್ದೇಶವಾಗಿದೆ ಎಂದರು.
ಕಾಂಗ್ರೆಸ್ ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಪಕ್ಷದ ಮುಖ್ಯಸ್ಥರು ಹೇಳಿದ್ದಾರೆ. ರಸ್ತೆಯಲ್ಲಿ ಸ್ವಲ್ಪ ಜನ ನಡೆದು ಹೋಗಬೇಕಿಲ್ಲ. ಆದರೆ ಕೋವಿಡ್ ಕಾನೂನುಗಳನ್ನು ಮುರಿಯಬಾರದು. ಈ ಅನುಮತಿ ಪಡೆಯುವುದು, ಬಿಡುವುದು ಬೇರೆ ಆದರೆ ನಿಬಂಧನೆಗಳನ್ನು ಎಲ್ಲರೂ ಸ್ವಯಂ ಅಳವಡಿಸಿಕೊಳ್ಳಬೇಕು.
ಚಿಕ್ಕಮಗಳೂರು ಜಿಲ್ಲೆ ಕೋವಿಡ್ ಲಸಿಕೆ ಹಾಕುವಲ್ಲಿ ಮೊದಲ ಡೋಸ್ ಶೇ.97 ಹಾಗೂ ಎರಡನೇ ಡೋಸ್ ಶೇ.81ರಷ್ಟು ಸಾಧನೆ ಮಾಡಿದೆ. ರಾಜ್ಯದ ಸರಾಸರಿಗಿಂತ ಜಿಲ್ಲೆ ಮುಂದಿದೆ ಚಿಕಿತ್ಸೆ ಹಾಗೂ ಆರೋಗ್ಯ ಕಾರ್ಯಕರ್ತೆಯರನ್ನ ಅಭಿನಂದಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments