‘ಪೊಲೀಸರು ಭಾಗಿಯಾಗಿದ್ರೆ ಜೈಲಿಗೆ’

Webdunia
ಬುಧವಾರ, 4 ಮೇ 2022 (19:49 IST)
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ರೂ ಬಿಡೋದಿಲ್ಲ. ರಾಜಕಾರಣಿಗಳಾಗಿರಲೇ, ಪೊಲೀಸರೇ ಆದ್ರೂ ಶಿಕ್ಷೆ ತಪ್ಪೋದಿಲ್ಲ. ಪೊಲೀಸರೇ ಭಾಗಿಯಾಗಿದ್ರೆ.. ಅವರ ಯೂನಿಫಾರ್ಮ್ ಬಿಚ್ಚಿ ಜೈಲಿಗೆ ಹಾಕ್ತೀವಿ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿದ್ಧರಾಮಯ್ಯ ಹಗರಣದ ಬಗ್ಗೆ ಆರೋಪ ಮಾಡ್ತಾ ಇದ್ದಾರೆ. ಆದ್ರೆ ಅವರ ಕಾಲದಲ್ಲೂ ಪಿಯು ಅಕ್ರಮ ಹಗರಣ ನಡೆದಿತ್ತು. ಆಗ 6 ವಿದ್ಯಾರ್ಥಿಗಳು ಆತ್ಮಹತ್ಯೆಗೂ ಶರಣಾಗಿದ್ದರು. ಅದನ್ನು ಅವರು ಮರೆತಂತಿದೆ ಎಂಬುದಾಗಿ ವಾಗ್ದಾಳಿ ನಡೆಸಿದರು. ಪ್ರತಿ ಪಕ್ಷಗಳ ಆರೋಪಗಳಲ್ಲಿ ನಿಜವಿಲ್ಲ. ಪಿಎಸ್‌ಐ ಅಕ್ರಮ ಬೆಳಕಿಗೆ ಬಂದ ಕೂಡಲೇ ಒಳ್ಳೆಯ ಸಿಐಡಿ ಟೀಂ ರಚನೆ ಮಾಡಿ, ತನಿಖೆಗೆ ನೀಡಿದ್ದೇವೆ. ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ರೂ ಕ್ರಮ ಕೈಗೊಳ್ಳಲಾಗುತ್ತದೆ. ಅದು ರಾಜಕಾರಣಿ, ಪೊಲೀಸರು ಆದ್ರೂ ಸರಿಯೇ.. ಪೊಲೀಸರೇ ಭಾಗಿಯಾಗಿದ್ದರೇ ಅದು ಸೀವಿಯರ್ ಅಫೆನ್ಸ್ ಆಗಲಿದೆ. ಅವರ ಯೂನಿಫಾರ್ಮ್ ಬಿಚ್ಚಿ, ಜೈಲಿಗೆ ಹಾಕೋದಾಗಿ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments