Select Your Language

Notifications

webdunia
webdunia
webdunia
Saturday, 12 April 2025
webdunia

ಕೊರೊನಾ 2ನೇ ಅಲೆ ಅಬ್ಬರ; ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ಮನವಿ

ಬೆಂಗಳೂರು
ಬೆಂಗಳೂರು , ಶನಿವಾರ, 3 ಏಪ್ರಿಲ್ 2021 (10:16 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಶುರುವಾದ ಹಿನ್ನಲೆಯಲ್ಲಿ ಆರೋಗ್ಯ ಸಚಿವ  ಡಾ.ಕೆ.ಸುಧಾಕರ್ ರಾಜ್ಯದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಹೆಚ್ಚಾಗಿದೆ. ದಿನಕ್ಕೆ 5 ಸಾವಿರ ಕೇಸುಗಳು ಪತ್ತೆಯಾಗ್ತಿವೆ. ದಯವಿಟ್ಟು ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ಇನ್ನೆರಡು ತಿಂಗಳು ಕೊರೊನಾ ಆರ್ಭಟ ಇರಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಪರಿಸ್ಥಿತಿ ಕೈ ಮೀರಬಾರದೆಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಏಕಾಏಕಿ ಮಾರ್ಗಸೂಚಿ ರಿಲೀಸ್ ಮಾಡಿಲ್ಲ. ಅಳೆದು ತೂಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮಕ್ಕಳಲ್ಲೇ ಹೆಚ್ಚು ಸೋಂಕು ಕಾಣಿಸಿಕೊಳ್ತಿದೆ. ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರವಹಿಸಿ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಸಂಬಂಧಕ್ಕೆ ಬಲಿಯಾಯ್ತು ಪತಿ-ಪತ್ನಿಯ ಜೀವ