Daily Horoscope

ಕೊರೊನಾ ಆತಂಕ: ಮಹತ್ವದ ಸಭೆ!

Webdunia
ಭಾನುವಾರ, 28 ನವೆಂಬರ್ 2021 (16:25 IST)
ಬೆಂಗಳೂರು : ಹೊಸ ತಳಿಯ ಕೊವಿಡ್19 ವೈರಾಣು ಆತಂಕ ಹಿನ್ನೆಲೆ ಸೋಮವಾರ ಅಥವಾ ಮಂಗಳವಾರ ಆರೋಗ್ಯ ಇಲಾಖೆ ಹಾಗೂ ತಾಂತ್ರಿಕ ಸಲಹಾ ಸಮಿತಿ ಜೊತೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸಭೆ ನಡೆಸಲಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಆರೋಗ್ಯ ಇಲಾಖೆ ಜೊತೆ ಪ್ರತ್ಯೇಕ ಸಭೆ ನಡೆಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆಗೂ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಜಿನೋಮಿಕ್ ಸೀಕ್ವೆನ್ಸ್ ಕುರಿತು ಸರ್ಕಾರ ಹೆಚ್ಚಿನ ಲಕ್ಷ್ಯ ವಹಿಸಿದೆ. ಕಳೆದ 15 ದಿನಗಳ ಹಿಂದೆಯೇ ಒಮಿಕ್ರಾನ್ ಮಾದರಿಯ ಕೊವಿಡ್ ತಳಿ ಎಂಟ್ರಿ ಕೊಟ್ಟಿದೆಯಾ ಎಂಬ ಪರಿಶೀಲನೆ ನಡೆಸಲಿದ್ದಾರೆ.
ಈ ಸಂಬಂಧ, ಕಳೆದ 15 ದಿನಗಳ ಹಿಂದೆಯೇ ಕೇರಳದಿಂದ ಬಂದ ವಿದ್ಯಾರ್ಥಿಗಳ ಮರು ಪರೀಕ್ಷೆ ನಡೆಸಬೇಕಿದೆ. ಮರು ಪರೀಕ್ಷೆ ಮೂಲಕ ಹೊಸ ತಳಿ ಎಂಟ್ರಿ ಕೊಟ್ಟಿಲ್ಲ ಎನ್ನುವುದನ್ನು ಸರ್ಕಾರ ಖಚಿತಪಡಿಸಿಕೊಳ್ಳಲಿದೆ.
 ಆತಂಕಕಾರಿ ವೈರಸ್ ಬಗ್ಗೆ ನಿನ್ನೆಯಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ಕೊಟ್ಟಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ದಿಷ್ಟ ಮಾರ್ಗಸೂಚಿ ಕ್ರಮ ಅನುಸರಿಸಲು ಆರೋಗ್ಯ ಸಚಿವರು ಸಭೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments