Select Your Language

Notifications

webdunia
webdunia
webdunia
webdunia

ಮುಂಬೈ ನಂಟಿನಿಂದಲೇ ಕೊರೊನಾ ಮಹಾಸ್ಫೋಟ

ಮುಂಬೈ ನಂಟಿನಿಂದಲೇ ಕೊರೊನಾ ಮಹಾಸ್ಫೋಟ
ಹಾಸನ , ಮಂಗಳವಾರ, 26 ಮೇ 2020 (15:52 IST)
ರಾಜ್ಯದಲ್ಲಿ ಮುಂಬೈ ನಂಟಿನಲ್ಲಿ ಕೊರೊನಾ ಮಹಾಸ್ಫೋಟಗೊಳ್ಳುತ್ತಾ ಸಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 13 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 112 ಕ್ಕೆ ಏರಿಕೆಯಾಗಿದೆ. ವರದಿಯಾದ ಎಲ್ಲಾ ಹೊಸ ಪ್ರಕರಣಗಳಿಗೆ ಮುಂಬೈ ಮೂಲದ ನಂಟಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಗೆ ಮಹಾರಾಷ್ಟ್ರ, ಮುಂಬೈನಿಂದ ಹೆಚ್ಚಿನ ಜನರು ಆಗಮಿಸಿದ್ದು, ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ. ಹೊಸ ಕೇಸ್ ಗಳಲ್ಲಿ ಆರು ಮಂದಿ ಮಹಿಳೆಯರು ಹಾಗೂ 7 ಮಂದಿ ಪುರುಷರಾಗಿದ್ದು, ಎಲ್ಲರೂ ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವಾರಾಗಿದ್ದಾರೆ.

ಈ ವರೆಗಿನ ವರದಿಯಂತೆ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಗರಿಷ್ಠ 80 ಮಂದಿ ಸೋಂಕಿತರು ಪತ್ತೆಯಾಗಿದ್ದು, ಹೊಳೆನರಸೀಪುರ 16, ಆಲೂರು 3,  ಅರಕಲಗೂರು 3, ಅರಸೀಕೆರೆ 1, ಹಾಸನದಲ್ಲಿ 9 ಪ್ರಕರಣ ದಾಖಲಾಗಿದ್ದು, ಪ್ರಕರಣಗಳು ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ  ದೃಢಪಟ್ಟಿವೆ.




Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45, 380ಕ್ಕೇರಿಕೆ