ಕೊರೊನಾ ಆರ್ಭಟಕ್ಕೆ ದೊಡ್ಡಬಳ್ಳಾಪುರ ವಿಲ ವಿಲ

Webdunia
ಶನಿವಾರ, 15 ಜನವರಿ 2022 (14:08 IST)
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ.
ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್​ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
 
ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು ಸೋಂಕು ಪತ್ತೆಯಾಗುತ್ತಿದ್ದು, ರೋಗ ಲಕ್ಷಣವಿರುವ ಮಕ್ಕಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತಾ ಆರೋಗ್ಯ ಇಲಾಖೆ ತಿಳಿಸಿದೆ.
 
ಇನ್ನು ಬೆಳಗಾವಿಯ ಅಥಣಿ ತಾಲೂಕಿನ ಯಂಕಂಚಿಯಲ್ಲಿ ಪ್ರೌಢಶಾಲೆಯ 10 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಹತ್ತನೇ ತರಗತಿಯ ಸುಮಾರು 95 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು, ಆ ಪೈಕಿ 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಅಂತಾ ಕ್ಷೇತ್ರ ಶಿಕ್ಷಣಾಧಿಕಾರಿ ಗೌಡಪ್ಪ ಖೋತಾ ಮಾಹಿತಿ ನೀಡಿದ್ದಾರೆ.
 
ಶಾಲೆಯ 35 ವಿದ್ಯಾರ್ಥಿಗಳ ಪರೀಕ್ಷಾ ವರದಿ ಬಾಕಿಯಿದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ. ಸದ್ಯ ಸೋಂಕಿತರಲ್ಲಿ ಕಡಿಮೆ ರೋಗ ಲಕ್ಷಣಗಳಿದ್ದು, ಎಲ್ಲರನ್ನೂ ಹೋಮ್​ ಐಸೋಲೇಷನ್​ನಲ್ಲಿ ಇಡಲಾಗಿದೆ. ಇನ್ನು ಓರ್ವ ಶಿಕ್ಷಕರಿಗೂ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಅಂತಾ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments