Webdunia - Bharat's app for daily news and videos

Install App

ಕೊರೊನಾ ಕೇಸ್ - 6 ತಿಂಗಳ ಮಗು ಸೇರಿ ಮೂವರು ಗುಣಮುಖ

Webdunia
ಮಂಗಳವಾರ, 5 ಮೇ 2020 (16:23 IST)
ಆರು ತಿಂಗಳು ಮಗು ಸೇರಿದಂತೆ ಮೂವರು ಕೋವಿಡ್-19 ನಿಂದ ಗುಣಮುಖರಾಗಿದ್ದಾರೆ.

ವಿಜಯಪುರ ಜಿಲ್ಲಾಸ್ಪತ್ರೆಯಿಂದ ಕೊರೊನಾದಿಂದ ಮುಕ್ತರಾದ ಮೂವರು ಬಿಡುಗಡೆಗೊಂಡಿದ್ದಾರೆ.  ಇವರಲ್ಲಿ ಆರು ತಿಂಗಳ ಗಂಡು ಮಗು ಕೂಡಾ ಗುಣಪಡಿಸಿರುವುದು ಇಲ್ಲಿಯ ತಜ್ಞ ವೈದ್ಯರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ವೈದ್ಯಕೀಯ ತಂಡ ಮತ್ತು ಜಿಲ್ಲಾ ವೈದ್ಯಕೀಯ ತಂಡದ ತಜ್ಞವೈದ್ಯರು ವೈದ್ಯಕೀಯ ಸಿಬ್ಬಂದಿಗಳ ನಿರಂತರ ಪರಿಶ್ರಮ ಮತ್ತು ಕಾಳಜಿಯ ಫಲವಾಗಿ ಮಹಾಮಾರಿ ಕೋವಿಡ್-19 ದಿಂದ ಆರು ತಿಂಗಳ ಮುಗುವನ್ನೂ ಕೂಡಾ ಗುಣಪಡಿಸಿರುವುದು ವಿಶೇಷವಾಗಿದ್ದು, ಜನರ ಮೆಚ್ಚುಗೆಗೆ ವೈದ್ಯ ಬಳಗ ಪಾತ್ರವಾಗಿದೆ.

ರೋಗಿ ಸಂಖ್ಯೆ 309 (ಮಹಿಳೆ- 70 ವರ್ಷ), ರೋಗಿ ಸಂಖ್ಯೆ 329 (ಮಗು -6 ತಿಂಗಳು), ರೋಗಿ ಸಂಖ್ಯೆ 330 (ಮಹಿಳೆ -28 ವರ್ಷ) ಇವರು ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.

ವಿಜಯಪುರದಲ್ಲಿ ಈವರೆಗೆ 47 ಪಾಸಿಟಿವ್ ಪ್ರಕರಣಗಳು ದೃಡಪಟ್ಟಿವೆ. ಇವರಲ್ಲಿ ಮೂವರು ಕೋವಿಡ್-19 ಸೋಂಕಿತ ರೋಗಿಗಳು ಮೃತಪಟ್ಟಿದ್ದು, 22 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ 22 ಕೋವಿಡ್-19 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಪರಿಣಾಮಕಾರಿ ಚಿಕಿತ್ಸೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments