Webdunia - Bharat's app for daily news and videos

Install App

ತಾಯಿ-ಮಗ, ಚಿಕ್ಕಮ್ಮನಲ್ಲಿ ಕೊರೊನಾ ಕೇಸ್ ದೃಢ : ಬೆಚ್ಚಿಬಿತ್ತು ಈ ಜಿಲ್ಲೆ

Webdunia
ಮಂಗಳವಾರ, 24 ಮಾರ್ಚ್ 2020 (16:21 IST)
ಮೆಕ್ಕಾ ಯಾತ್ರೆಯಿಂದ ಹಿಂದಿರುಗಿದ್ದ ಮಹಿಳೆಯೊಬ್ಬರಲ್ಲಿ ಕೋವಿಡ್ 19 ವೈರಸ್ ಇರೋದು ಪಕ್ಕಾ ಆಗಿದೆ. ಈ ಮೂಲಕ ಈ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಮೂರು ಜನರ ಪೈಕಿ 56 ವರ್ಷದ ಮತ್ತೊಬ್ಬ ಮಹಿಳೆಯಲ್ಲೂ ಕೋವಿಡ್‌ ಸೋಂಕು ಇರುವುದು ದೃಢಪಟ್ಟಿದೆ.

ಗೌರಿಬಿದನೂರು ನಗರದ ಚೌಡೇಶ್ವರಿ ಬಡಾವಣೆಯ 31 ರ ಪ್ರಾಯದ ವ್ಯಕ್ತಿಯೊಬ್ಬರು ಕಳೆದ ಫೆಬ್ರುವರಿಯಲ್ಲಿ ತಮ್ಮ ತಾಯಿ ಮತ್ತು ತೊಂಡೆಬಾವಿಯಲ್ಲಿರುವ ಚಿಕ್ಕಮ್ಮನ ಜತೆ ಮೆಕ್ಕಾ ಯಾತ್ರೆ ಕೈಗೊಂಡಿದ್ದರು. ಮಾರ್ಚ್ 14 ರಂದು ಯಾತ್ರೆಯಿಂದ ವಾಪಾಸಾಗಿದ್ದರು. ಈ ಪೈಕಿ ಆರೋಗ್ಯ ಹದಗೆಟ್ಟ ಕಾರಣಕ್ಕೆ ತಾಯಿ–ಮಗ ಬೆಂಗಳೂರಿಗೆ ತೆರಳಿ ತಪಾಸಣೆ ಮಾಡಿಸಿಕೊಂಡ ವೇಳೆ ಮಗನಲ್ಲಿ ಕೋವಿಡ್‌ ಸೋಂಕಿರುವುದು ಮಾ.21 ರಂದು ದೃಢಪಟ್ಟಿತ್ತು.

ಸೋಂಕಿತ ವ್ಯಕ್ತಿಯ ಚಿಕ್ಕಮ್ಮನನ್ನು ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ತಪಾಸಣೆಗೆ ದಾಖಲಿಸಿ, ನಿಗಾ ವ್ಯವಸ್ಥೆಯಲ್ಲಿಡಲಾಗಿತ್ತು. ಅವರಲ್ಲೂ ಸೋಂಕು ಇರುವುದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್‌ ಗೌಡ ಖಚಿತಪಡಿಸಿದ್ದಾರೆ.

ಸದ್ಯ, ಮಗ ಮತ್ತು ತಾಯಿಗೆ ಬೆಂಗಳೂರಿನಲ್ಲಿ, ಚಿಕ್ಕಮ್ಮನಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments