Publish Date: Tue, 04 May 2021 (11:08 IST)
Updated Date: Tue, 04 May 2021 (11:12 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ರಾಜ್ಯ ಸರ್ಕಾರ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಆಶಾ ಕಾರ್ಯಕರ್ತೆಯರಿಂದ ಕೊವಿಡ್ ಟೆಸ್ಟ್ ಮಾಡಿಸಿ. ಜಿಲ್ಲೆ ತಾಲೂಕು ಆಸ್ಪತ್ರೆಗಳ ಸ್ಥಿತಿಗತಿಯ ವರದಿ ಪಡೆಯಿರಿ. ನಾವು ವಾರದ ಹಿಂದೆಯೇ ಗಮನಹರಿಸಿ ಎಚ್ಚರಿಸಿದ್ದೆವು. ಆದರೆ ಸರ್ಕಾರ ಎಚ್ಚರಗೊಳ್ಳದ ಪರಿಣಾಮ ಈ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ.
ಅಲ್ಲದೇ ರಾಜ್ಯದೆಲ್ಲೆಡೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಮೂಲಸೌಕರ್ಯವಿಲ್ಲದೆ ಜಿಲ್ಲೆಗಳ ಸ್ಥಿತಿ ಶೋಚನೀಯವಾಗಿದೆ. ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ.