Webdunia - Bharat's app for daily news and videos

Install App

ಕೊರೊನಾ ಶಂಕಿತರ ಕೈಗೆ ಬೀಳುತ್ತಿದೆ ಪಕ್ಕಾ ಸೀಲ್

Webdunia
ಗುರುವಾರ, 19 ಮಾರ್ಚ್ 2020 (18:49 IST)
ಕೊರೊನಾ ಶಂಕಿತರ ಪತ್ತೆಗೆ ಸರಕಾರ ಹೊಸ ಮಾರ್ಗ ಕಂಡುಕೊಂಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ತಾಲೂಕಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ವಿದೇಶದಿಂದ ಆಗಮಿಸುವ ಕೊರೊನಾ ಶಂಕಿತ ಸಿ-ವರ್ಗದ ಪ್ರಯಾಣಿಕರಿಗೆ ಕಡ್ಡಾಯ ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆ ಯನ್ನು ಸಿ-ವರ್ಗದಲ್ಲಿ ವಿಂಗಡಿಸಿರುವ ವಿದೇಶದಿಂದ ಸ್ವದೇಶಕ್ಕೆ ಬಂದ ಕೊರೊನಾ ಶಂಕಿತರಿಗೆ ಸ್ಟಾಂಪಿಂಗ್ ಮಾಡಿರುವುದರಿಂದ ಸಿ-ವರ್ಗದ ಪ್ರಯಾಣಿಕರು ಇಂದಿನಿಂದ ಏಪ್ರಿಲ್ 03 ರ ವರೆಗೆ ಮನೆಯಲ್ಲಿಯೇ ಪ್ರತ್ಯೇಕ ಚಿಕಿತ್ಸೆ ಪಡೆಯುವಂತೆ ಆಗಬೇಕು. ರಾತ್ರಿಯಿಂದ ಬಂದ 226 ಸಿ-ವರ್ಗದ ಪ್ರಯಾಣಿಕರಿಗೆ ದಿನಾಂಕ ಸಮೇತ ಬಲಗೈಗೆ ಸ್ಟಾಂಪಿಂಗ್ ಹಾಕಿ ಮನೆಗೆ ಕಳುಹಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾರ್ಚ್ 13 ರಿಂದ ಇಲ್ಲಿಯವರೆಗೆ ವಿದೇಶಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 744 ಪ್ರಯಾಣಿಕರನ್ನು ತಪಾಸಣೆ ನಡೆಸಲಾಗಿದೆ. 744 ಪ್ರಯಾಣಿಕರಲ್ಲಿ ಎ-ವರ್ಗದಲ್ಲಿ 11, ಬಿ-ವರ್ಗದಲ್ಲಿ 28 ಇದ್ದು ಅದರಲ್ಲಿ ಸಿ-ವರ್ಗದ 704 ಪ್ರಯಾಣಿಕರ ಸಂಪೂರ್ಣ ಮಾಹಿತಿ ಪಡೆದು ಅವರ ವಾಸಸ್ಥಳಗಳಿಗೆ ಕಳುಹಿಸಲಾಗಿದೆ. ಅವರ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಲ್ಲಿ ಚಿಕಿತ್ಸೆ ಬರುವಂತೆ ಸೂಚಿಸಲಾಗಿದೆ. ಬಿ-ವರ್ಗದಲ್ಲಿ 17 ಪ್ರಯಾಣಿಕರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈವರೆಗೂ ಸೋಂಕಿತರು ಪತ್ತೆ ಆಗಿಲ್ಲ ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments