ಕೊರೊನಾ ಎಚ್ಚರಿಕೆ ಮೋದಿ ಭಾಷಣ

Webdunia
ಗುರುವಾರ, 13 ಜನವರಿ 2022 (18:28 IST)
ದೇಶದಲ್ಲಿ ಕೊರೊನಾ ಅಬ್ಬರ ತಡೆಯಲು ಲೋಕಲ್ ಕಂಟೈನ್ ಮೆಂಟ್ ಝೋನ್ ಗಳ ಮೇಲೆ ಹೆಚ್ಚು ನಿಗಾ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
 
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳ ಜೊತೆ ವರ್ಚುವಲ್ ಸಭೆ ನಂತರ ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ತಜ್ಞರ ಅಭಿಪ್ರಾಯದ ಪ್ರಕಾರ ಕೊರೊನಾ ವಿರುದ್ಧದ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗವಾಗಿದೆ ಎಂದರು.
ಶೇ.92ರಷ್ಟು ಮೊದಲ ಡೋಜ್ ನೀಡಲಾಗಿದೆ. ಎರಡನೇ ಡೋಜ್ ಕೂಡ ಪ್ರಗತಿಯಲ್ಲಿದೆ. ಕೊರೊನಾ ರೂಪಾಂತರಿ ಒಮಿಕ್ರಾನ್ ಅಬ್ಬರ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಹಲವಾರು ರೂಪಾಂತರಿ ಕೊರೊನಾ ವೈರಸ್ ಹರಡುವ ಸಾಧ್ಯತೆ ಇದ್ದು, ಇದಕ್ಕೆಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಬೇಕಾಗಿದೆ ಎಂದು ಪ್ರಧಾನಿ ಹೇಳಿದರು.
 
ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಹಭಾಗಿತ್ವದಲ್ಲಿ ಕೊರೊನಾ ನಿಯಂತ್ರಣಕ್ಕೆ ಶ್ರಮ ವಹಿಸಲಾಗುತ್ತಿದೆ. ಲೋಕಲ್ ಕಂಟೈನ್ ಮೆಂಟ್ ಮೇಲೆ ಹೆಚ್ಚು ನಿಗಾ ವಹಿಸಬೇಕು ಹಾಗೂ ಸಾಧ್ಯವಾಷ್ಟು ಅತ್ಯಂತ ವೇಗವಾಗಿ ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ ಎಂದರು.
 
ಹೋಂ ಐಸೋಲೇಷನ್ ನಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲು ಆದ್ಯತೆ ನೀಡಲಾಗುತ್ತಿದ್ದು, ಟೆಲಿ ಮೆಡಿಸನ್ ವ್ಯವಸ್ಥೆ ಮೂಲಕ ಚಿಕಿತ್ಸೆಗೂ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ 12 ಲಕ್ಷ ಮಕ್ಕಳಿಗೆ ಆಕ್ಸಿಜನ್ ಇರುವ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. 5 ಲಕ್ಷ ವಿಶೇಷ ಆಂಬುಲೆನ್ಸ್ ವ್ಯವಸ್ಥೆ ಜಾರಿಯಲ್ಲಿದೆ ಎಂದು ಮೋದಿ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ರಾಜ್ಯ ಸರ್ಕಾರದಿಂದ ಕೋಟಿಗಟ್ಟಲೆ ಜಾಹೀರಾತು: ಭಾರೀ ವಿವಾದ

ಬಳ್ಳಾರಿ ಶೂಟೌಟ್ ಕೇಸ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಮರಣೋತ್ತರ ಪರೀಕ್ಷೆಯಲ್ಲಿದೆ ಶಾಕಿಂಗ್ ವಿಚಾರಗಳು

ಕರ್ನಾಟಕವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಕೇರಳ ಸಿಎಂಗೆ ಠಕ್ಕರ್ ಕೊಟ್ರು ಸಿದ್ದರಾಮಯ್ಯ

ಸಿದ್ದರಾಮಯ್ಯ ಎದುರೇ ಕೊಟ್ಟ ಮಾತು ನೆನಪಿಸಿದ ಡಿಕೆ ಶಿವಕುಮಾರ್: ಸಂಕ್ರಾಂತಿಗೆ ಕ್ರಾಂತಿಯಾಗುತ್ತಾ

Karnataka Weather: ವಿಪರೀತ ಚಳಿ ಜೊತೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣ

ಮುಂದಿನ ಸುದ್ದಿ
Show comments