ಮಕ್ಕಳಾಗುವ ಹರಕೆ ಹೊರಲೂ ಕೊರೊನಾ ಭೀತಿ

Webdunia
ಸೋಮವಾರ, 16 ಮಾರ್ಚ್ 2020 (18:24 IST)
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಕ್ಕಳಾಗುವ ಹರಕೆ ಹೊರಲು ಮಹಿಳೆಯರು ಹಿಂದೇಟು ಹಾಕುವಂತಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮುದುಗಾನಕುಂಟೆ ಗ್ರಾಮದ ಶ್ರೀ ಗಂಗಾಭಾಗೀರಥಿ ದೇವಾಲಯವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಗಂಗಾಭಾಗೀರಥಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಸೋಮವಾರ ದೇವಾಲಯಕ್ಕೆ ಬರುತ್ತಿದ್ದ ಭಕ್ತರು ಎಂದಿನಂತೆ ದೇವಾಲಯಕ್ಕೆ ಆಗಮಿಸಿದ್ದರು. ಆದರೆ ದೇವರ ದರ್ಶನ ಸಿಗದೆ ಮರಳಿದ್ದಾರೆ. ಪ್ರವೇಶ ದ್ವಾರಗಳಲ್ಲಿ ದೇವಸ್ಥಾನ ಬಂದ್ ಆಗಿರುವ ನಾಮಫಲಕ ಹಾಕಲಾಗಿದೆ.

ನಾಲ್ಕೂ ಕಡೆ ಪೊಲೀಸರು ಹಾಗೂ ಕಂದಾಯ ಇಲಾಖೆಯ ಗ್ರಾಮ ಸಹಾಯಕರು, ಮುಜರಾಯಿ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರನ್ನು ವಾಪಸ್ ಕಳುಹಿಸಲಾಗುತ್ತಿದೆ. ಹೀಗಾಗಿ ದೂರದೂರುಗಳಿಂದ ಬಂದ ಭಕ್ತರು ಗಂಗಾದೇವಿಯ ದರ್ಶನ ಪಡೆಯಲಾಗದೆ ನಿರಾಸೆಯಿಂದ ತೆರಳುತ್ತಿದ್ದಾರೆ.

ಸಂತಾನಭಾಗ್ಯ ಇಲ್ಲದವರು ಈ ಗಂಗಾಭಾಗೀರಥಿಗೆ ಪ್ರತಿ ಸೋಮವಾರ ಆಗಮಿಸಿ ದೇವಾಯಲದ ಆವರಣದಲ್ಲಿನ ಕಲ್ಯಾಣಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸಿ ದೇವಿಗೆ ಹರಕೆ ಹೊತ್ತರೆ ಮಕ್ಕಳಾಗುತ್ತವೆ ಎನ್ನುವ ನಂಬಿಕೆ ಭಕ್ತರಲ್ಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಹಳಸಿದ ಸಂಬಂಧಕ್ಕೆ ತೇಪೆ ಹಾಕಲು ಬ್ರೇಕ್ ಫಾಸ್ಟ್ ಮೀಟಿಂಗ್: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments