ಕೊರೊನಾ ರಣಕೇಕೆ ಹೈ ಅಲರ್ಟ್

Webdunia
ಸೋಮವಾರ, 3 ಜನವರಿ 2022 (14:08 IST)
ಕೋವಿಡ್ ಮೂರನೆ ಅಲೆಯ ಊಹಾಪೋಹಗಳ ನಡುವೆ ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಶೇ.241ಪಟ್ಟು ಏರಿಕೆಯಾಗಿದ್ದು, ಮಹಾರಾಷ್ಟ್ರ, ನವದೆಹಲಿ, ಗುಜರಾತ್ ಸೇರಿ ಐದು ರಾಜ್ಯಗಳಲ್ಲಿ ಆತಂಕ ಸೃಷ್ಟಿಯಾಗಿದೆ.
 
ಕೇಂದ್ರ ಸರ್ಕಾರ ಮೇಲಿಂದ ಮೇಲೆ ರಾಜ್ಯ ಸರ್ಕಾರಗಳಿಗೆ ಪತ್ರಗಳನ್ನು ಬರೆದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಲೇ ಇದೆ.
ಸೋಂಕು ಅಂಕೆ ಮೀರಿ ಏರಿಕೆಯಾಗುತ್ತಿದೆ. ಆತಂಕಕಾರಿ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ದಲ್ಲಿ ಕೋವಿಡ್ ಸೋಂಕಿತರಿಗೆ ಆಮ್ಲಜನಕ ಪೂರೈಕೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
 
ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕದಲ್ಲಿ ಸೋಂಕು ವೇಗವಾಗಿ ಹರಡಲಾರಂಭಿಸಿದೆ. ಭಾನುವಾರ 1,187 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,292ರಷ್ಟಾಗಿವೆ. ಬೆಂಗಳೂರು ನಗರವೊಂದರಲ್ಲೇ 8671 ದಾಖಲಾಗಿವೆ. ಹೊಸದಾಗಿ ಆರು ಸಾವುಗಳಾಗಿದ್ದು, ಅದರಲ್ಲಿ ಬೆಂಗಳೂರು ನಗರದಲ್ಲಿ ಮೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿವೆ.
 
ಹೊಸ ಸೋಂಕಿನ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 923, ದಕ್ಷಿಣ ಕನ್ನಡ ದಲ್ಲಿ 63, ಉಡುಪಿಯಲ್ಲಿ 54, ಮೈಸೂರಿ ನಲ್ಲಿ 20, ಬೆಳಗಾವಿಯಲ್ಲಿ 12, ತುಮಕೂರು, ಕೊಡಗು, ಮಂಡ್ಯ ಜಿಲ್ಲೆಯಲ್ಲಿ ತಲಾ 10 ಪ್ರಕರಣಗಳು ವರದಿಯಾಗಿವೆ. ಹಲವು ತಿಂಗಳಿಂದಲೂ ಶೇ.1ರ ಒಳಗೆ ನಿಯಂತ್ರಣ ದಲ್ಲಿದ್ದ ಸೋಂಕು, ನಿನ್ನೆ ಶೇ.1.08ರಷ್ಟಾಗಿದೆ. ಸಾವಿನ ಪ್ರಮಾಣವೂ ಶೇ.0.5ರಷ್ಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments