Webdunia - Bharat's app for daily news and videos

Install App

ಈ ವ್ಯಕ್ತಿಯಿಂದ ಮಾವು ಖರೀದಿಸಿದವರಿಗೆ ಕೊರೊನಾ ಭೀತಿ

Webdunia
ಸೋಮವಾರ, 11 ಮೇ 2020 (21:35 IST)
ಮಾವಿನ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ವೈರಸ್ ತಗುಲಿದೆ.

ಮಾವಿನ ಹಣ್ಣಿನ 25 ವರ್ಷದ ವ್ಯಾಪಾರಿಗೆ ಕೊರೋನಾ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದ ನಿವಾಸಿಯಾಗಿದ್ದಾನೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.

ಸೋಂಕಿತ ವ್ಯಕ್ತಿ ಲಾರಿ ಚಾಲಕನಾಗಿದ್ದು, ಮಾವಿನ ಹಣ್ಣಿನ ವ್ಯಾಪಾರ ಮಾಡುತ್ತಿದ್ದ. ತನ್ನ ಸಹೋದರ ಹಾಗೂ ಮೂವರು ಕ್ಲಿನರ್ ಗಳೊಂದಿಗೆ  ತನ್ನದೇ ಮಿನಿ ಲಾರಿಯಲ್ಲಿ  ಏಪ್ರಿಲ್ 23, 26, 29 ಕ್ಕೆ ಒಟ್ಟು ಮೂರು ಬಾರಿ ಮಾವಿನ ಕಾಯಿ ಲೋಡ್ ತೆಗೆದುಕೊಂಡು ಮುಂಬೈನ 'ವಾಸಿ' ಎಪಿಎಂಸಿ ಮಾರುಕಟ್ಟೆಗೆ ಹೋಗಿ ಬಂದಿದ್ದಾನೆ.

ಸೋಂಕಿತ P- 853 ವ್ಯಕ್ತಿ ಮೇ 1 ರಿಂದ 6 ರೆಗೆ ಸ್ವಗ್ರಾಮ ಅಂದಲಗಿ, ಹಾನಗಲ್ ತಾಲೂಕಿನ ಹನುಮಸಾಗರ, ಶಡಗರವಳ್ಳಿ, ಕೊಪ್ಪರಸಿಕೊಪ್ಪ, ಬೈಲವಾಳ ಸೇರಿದಂತೆ ಒಟ್ಟು 10 ಗ್ರಾಮಗಳಲ್ಲಿ ಸಂಚಾರ ಮಾಡಿದ್ದಾನೆ. ಮೇ 6 ರಂದು ಆರೋಗ್ಯಾಧಿಕಾರಿಗಳು ಸೋಂಕಿತನ ಮಾಹಿತಿ ತಿಳಿದು ಕ್ವಾರೆಂಟೈನ್ ಮಾಡಿದ್ದಾರೆ ಎಂದಿದ್ದಾರೆ.

ಸೋಂಕಿತ P- 853 ವ್ಯಕ್ತಿಯ ಪ್ರಾಥಮಿಕ ಸಂಪಕರ್ದಲ್ಲಿ 16 ಜನರನ್ನು ಗುರುತಿಸಿ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ದ್ವಿತೀಯ ಸಂಪಕರ್ದಲ್ಲಿ 23 ಜನರನ್ನು ಗುರುತಿಸಿ ಗೃಹ ಪ್ರತ್ಯೇಕತೆಯಲ್ಲಿ ಇರಿಸಲಾಗಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments