Select Your Language

Notifications

webdunia
webdunia
webdunia
webdunia

ಕೊರೊನಾ ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ

ಕೊರೊನಾ ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಸಂಸದ
ರಾಮನಗರ , ಭಾನುವಾರ, 19 ಜುಲೈ 2020 (21:28 IST)
ಕೋವಿಡ್ 19 ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಕಾಂಗ್ರೆಸ್ ಸಂಸದ ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ತಮ್ಮ ಕ್ಷೇತ್ರದ ವ್ಯಾಪ್ತಿಯ ಕನಕಪುರದ ನಿವಾಸಿ 73 ವರ್ಷ ವಯಸ್ಸಿನ ನರಸಿಂಹ ಶೆಟ್ಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಸಂಸದ ಡಿ.ಕೆ.ಸುರೇಶ್ ಅವರು ಆದರ್ಶ ಮೆರೆದಿದ್ದಾರೆ.

ಮೃತರ ಅಂತ್ಯಸಂಸ್ಕಾರವನ್ನು ಕನಕಪುರ ದೇಗುಲಮಠದ ಬಳಿಯಿರುವ ಸ್ಮಶಾನದಲ್ಲಿ ಎಲ್ಲಾ ವಿಧಿ-ವಿಧಾನಗಳ ಪ್ರಕಾರ ಗೌರವಯುತವಾಗಿ ನೆರವೇರಿಸಲು ಸಹಕರಿಸಿದ್ದಾರೆ.

ಅಂತ್ಯಸಂಸ್ಕಾರದಲ್ಲಿ ಪ್ರತಿಯೊಬ್ಬರೂ ಅಗತ್ಯ ಸುರಕ್ಷಾ ಪರಿಕರಗಳಾದ ಪಿಪಿಇ ಕಿಟ್ ಬಳಸಿ ಪಾಲ್ಗೊಂಡಿದ್ದರು.  



Share this Story:

Follow Webdunia kannada

ಮುಂದಿನ ಸುದ್ದಿ

ಡೆಡ್ಲಿ ಕೊರೊನಾಕ್ಕೆ ಮುಂದುವರೆದ ಸಾವಿನ ಸರದಿ