Publish Date: Sat, 04 Jul 2020 (16:28 IST)
Updated Date: Sat, 04 Jul 2020 (16:30 IST)
ಕೊರೊನಾ ಕಿಟ್ ಸೇರಿದಂತೆ ಇತರೆ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪಕ್ಕೆ ಆರೋಗ್ಯ ಸಚಿವ ಕಿಡಿಕಾರಿದ್ದಾರೆ.
ಯಾವುದೇ ತನಿಖೆಗೆ ಸಿದ್ಧವಿರುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ ಅನುಭನ ಇರುವ ರಾಜಕಾರಣಿ. ರಾಜ್ಯದಲ್ಲಿ ಕೊರೊನಾ ನಿಯಂತ್ರಣ ವಿಚಾರದಲ್ಲಿ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಆದರೆ ಇಂಥ ಸಂದರ್ಭದಲ್ಲಿ ಕೇವಲ ಪ್ರಚಾರಕ್ಕಾಗಿ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ.
ಕೊರೋನಾ ಕಿಟ್ಗಳ ಖರೀದಿಯಲ್ಲಿ ಒಂದು ರೂಪಾಯಿ ಕೂಡ ಅವ್ಯವಹಾರವಾಗಿದ್ದರೆ ಎಂತಹುದೇ ತನಿಖೆಗೆ ನಾನು ಮತ್ತು ನಮ್ಮ ಸರ್ಕಾರ ಸಿದ್ಧವಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೊರೊನಾ ನಿಯಂತ್ರಣಕ್ಕೆ ಯಾವುದೇ ಸಹಕಾರ ನೀಡಿಲ್ಲ.
ಆದ್ದರಿಂದ ಈ ರೀತಿಯ ಆರೋಪ ಮಾಡುವುದನ್ನು ಬಿಟ್ಟು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಸರ್ಕಾರದ ಜೊತೆ ಕೈ ಜೋಡಿಸಲಿ ಎಂದರು.