Webdunia - Bharat's app for daily news and videos

Install App

ಕೊರೊನಾ ಭೀತಿ : ರೈತನ ಕೆಲಸಕ್ಕೆ ಸೆಲ್ಯೂಟ್ ಹೊಡೆದ ಪಿ ಎಸ್ ಐ

Webdunia
ಬುಧವಾರ, 25 ಮಾರ್ಚ್ 2020 (17:57 IST)
ಕೊರೊನಾ ವೈರಸ್ ಮುಂಜಾಗ್ರತೆಗೆ ರೈತನೊಬ್ಬ ಕೈಗೊಂಡಿರುವ ಕ್ರಮಕ್ಕೆ ಪಿಎಸ್ ಐ ಮೆಚ್ಚುಗೆ ವ್ಯಕ್ತಪಡಿಸಿ ಸೆಲ್ಯೂಟ್ ಹೊಡೆದಿದ್ದಾರೆ.

ಕಲಬುರಗಿ ಜಿಲ್ಲೆಯ ನಿಂಬರ್ಗಾ ವಲಯದ  ಹಿತ್ತಲ ಶಿರೂರ ಗ್ರಾಮದಲ್ಲಿ ರೈತರೊಬ್ಬರು ಕೊರೋನಾ ವೈರಸನಿಂದ ರಕ್ಷಣೆ ಪಡೆಯಲು ಎತ್ತಿನ ಬಂಡಿಯಲ್ಲಿ ಹೆಲ್ಮೆಟ್ ಧರಿಸಿದ್ದರು. ಇದನ್ನು ಕಂಡು ನಿಂಬರ್ಗಾ ಠಾಣೆಯ ಪಿಎಸ್‍ಐ ಸುರೇಶಕುಮಾರ ಚವ್ಹಾಣ ಅವರು ರೈತ ಲಕ್ಕಪ್ಪ ಕೊರಬಾ ಅವರಿಗೆ  ಸೆಲ್ಯೂಟ್ ನೀಡಿ ಗೌರವ ಸಲ್ಲಿಸಿದರು.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಹಿತ್ತಲ ಶಿರೂರ ಗ್ರಾಮದಲ್ಲಿ ಕೊರೋನಾ ಶಂಕಿತನೊಬ್ಬ ಪುಣೆ ಆಸ್ಪತ್ರೆಯಿಂದ ಪರಾರಿಯಾಗಿ ಬಂದ ಘಟನೆ ಇತ್ತೀಚಿಗಷ್ಟೇ ಭಾರೀ ಸದ್ದು ಮಾಡಿತ್ತು. ಆದರೆ  ರೈತರೊಬ್ಬರು ಹೊಲದಿಂದ ಎತ್ತನಗಾಡಿಯಲ್ಲಿ ಬರುವಾಗ ಮುಖಕ್ಕೆ ಹೆಲ್ಮೆಟ್ ಧರಿಸಿಕೊಂಡು ಬರುತ್ತಿರುವುದನ್ನು ಕಂಡು ನಿಂಬರ್ಗಾ ಠಾಣೆಯ ಪಿಎಸ್‍ಐ ಸುರೇಶಕುಮಾರ ಚವ್ಹಾಣ ತಾವೇ ಸ್ವತಃ ನಿಂತು ರೈತ ಲಕ್ಕಪ್ಪ ಕೊರಬಾ ಅವರಿಗೆ  ಸೆಲ್ಯೂಟ್ ನೀಡಿ ಗೌರವ ಸಲ್ಲಿಸಿದರು.

ಶಾಲೆ ಕಲಿತ ಅಕ್ಷರಸ್ಥರಿಗೆ ಇರದೇ ಇರುವ ಜ್ಞಾನ ರೈತರೊಬ್ಬರಿಗೆ ಇರುವುದನ್ನು ಕಂಡು ಮೂಕವಿಸ್ಮಿತನಾದೆ. ಮಾತು ಬರದೇ ಆ ಮಹಾಶಯರಿಗೆ ಗೌರವ ಸಲ್ಲಿಸಿದೆ ಎಂದು ಹೇಳುತ್ತಾರೆ ಪಿಎಸ್‍ಐ ಸುರೇಶಕುಮಾರ ಚವ್ಹಾಣ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments