Select Your Language

Notifications

webdunia
webdunia
webdunia
webdunia

ನಮ್ಮೂರ ತಿಂಡಿ ಹೋಟೆಲ್ ಉದ್ದಿಮೆಯನ್ನು ಮುಚ್ಚಿರುವ ಬಗ್ಗೆ

ನಮ್ಮೂರ  ತಿಂಡಿ ಹೋಟೆಲ್ ಉದ್ದಿಮೆಯನ್ನು ಮುಚ್ಚಿರುವ ಬಗ್ಗೆ
bangalore , ಮಂಗಳವಾರ, 3 ಆಗಸ್ಟ್ 2021 (20:25 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ವಲಯದ ಜ್ಞಾನಭಾರತಿ ವಾರ್ಡ್ನ ನಾಗರಭಾವಿ ಮುಖ್ಯರಸ್ತೆಯ ಎನ್.ಜಿ.ಎಫ್ ಬಡಾವಣೆಯಲ್ಲಿರುವ ನಮ್ಮೂರ ತಿಂಡಿ ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಕೋವಿಡ್-19 ಪರೀಕ್ಷೆ ನಡೆಸಿದಾಗ ಒಬ್ಬ ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿರುತ್ತದೆ. ಈ ಸಂಬಂಧ ಅವರನ್ನು ಸೂಕ್ತ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಯಿಸಲಾಗಿದ್ದು, ಹೋಟೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲರಿಗೂ ಕೋವಿಡ್-19 ಪರೀಕ್ಷೆ ನಡೆಸಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿರುತ್ತದೆ.
  
ಸದರಿ ಹೋಟೆಲ್‌ನಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡಲಾಗಿದ್ದು, ಹೋಟೆಲ್‌ನ್ನು ಮುಚ್ಚಲಾಗಿರುತ್ತದೆ. ಉಳಿದ ಸಿಬ್ಬಂದಿಗಳ ಕೋವಿಡ್-19 ಪರೀಕ್ಷೆಯ ಫಲಿತಾಂಶ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು. ಅಲ್ಲದೆ ರಾಜರಾಜೇಶ್ವರಿನಗರ ವಲಯದಲ್ಲಿರುವ ಎಲ್ಲಾ ಹೋಟೆಲ್ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಿಸುವಂತೆ  ಮತ್ತು ಕೋವಿಡ್-19 ಲಸಿಕೆ ಹಾಕಿಸುವಂತೆ ವಲಯ ಆಯುಕ್ತರು ಶ್ರೀ ರೆಡ್ಡಿ ಶಂಕರ ಬಾಬು ರವರು ಹೋಟೆಲ್ ಮಾಲೀಕರಲ್ಲಿ ಈ ಮೂಲಕ ಮನವಿ ಮಾಡಿರುತ್ತಾರೆ.
hotel

Share this Story:

Follow Webdunia kannada

ಮುಂದಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ