Webdunia - Bharat's app for daily news and videos

Install App

5 ಜನ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕೊರೊನಾ

Webdunia
ಶುಕ್ರವಾರ, 26 ಜೂನ್ 2020 (20:31 IST)
ಆರೋಗ್ಯ ಇಲಾಖೆಯ ಐವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊಪ್ಪಳದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರದ ಐವರು ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಕೊರೊನಾ ಸೋಂಕು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.

ಕುಷ್ಟಗಿ ತಾಲ್ಲೂಕಿನ ತಾವರಗೇರಾ ಆರೋಗ್ಯ ಸಿಬ್ಬಂದಿ 30  ವರ್ಷದ ಮಹಿಳೆ, 23  ವರ್ಷದ ಮಹಿಳೆ, 24 ವರ್ಷದ ಇಬ್ಬರಲ್ಲಿ 34  ವರ್ಷದ ವ್ಯಕ್ತಿಗೆ ಸೊಂಕು ಧೃಢಪಟ್ಟಿದೆ. ಕುಷ್ಟಗಿ ತಾಲ್ಲೂಕಿನ ದೊಣ್ಣೆಗುಡ್ಡ ಗ್ರಾಮದ 21 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಗ್ರಾಮಕ್ಕೆ ಪ್ರಯಾಣ ಮಾಡಿದ ಹಿನ್ನೆಲೆ ಹೊಂದಿದ್ದಾರೆ.

ಕುಕನೂರು ಪಟ್ಟಣದಲ್ಲಿ 8 ವರ್ಷದ ಬಾಲಕಿಗೆ ಸೋಂಕು ಧೃಢವಾಗಿದ್ದು, ಯಾವುದೇ ಪ್ರಯಾಣ ಹಿನ್ನೆಲೆ ಇರುವುದಿಲ್ಲ. ಕೊಪ್ಪಳ ತಾಲ್ಲೂಕಿನ ಹಂದ್ರಾಳ ಗ್ರಾಮದ 30  ವರ್ಷ ವ್ಯಕ್ತಿಗೆ ಸೋಂಕು ಧೃಢವಾಗಿದ್ದು, ಬಳ್ಳಾರಿಯಿಂದ ಆಗಮಿಸಿದ್ದಾನೆ. ಕಂಪಸಾಗರ ಗ್ರಾಮದಲ್ಲಿ 30  ವರ್ಷ ವ್ಯಕ್ತಿಗೂ ಸೊಂಕು ಧೃಢವಾಗಿದ್ದು, ಹೊಸಪೇಟೆಯಿಂದ ಆಗಮಿಸಿದ್ದಾನೆ. ತಿಗರಿ ಗ್ರಾಮದ 26 ವರ್ಷದ ವ್ಯಕ್ತಿಗೂ ಸಹ ಸೋಂಕು ಧೃಢವಾಗಿದ್ದು, ಯಾವುದೇ ಪ್ರಯಾಣ ಮಾಡಿಲ್ಲ.

ಯಲಬುರ್ಗಾ ತಾಲ್ಲೂಕಿನ ಶಿರೂರು ಗ್ರಾಮದ 38  ವರ್ಷದ ವ್ಯಕ್ತಿಗೆ ಸೊಂಕು ಧೃಢವಾಗಿದ್ದು, ಯಾವುದೇ ಪ್ರಯಾಣ ಮಾಡಿಲ್ಲ. ಗಂಗಾವತಿ ನಗರದಲ್ಲಿ 24 ವರ್ಷದ ಯುವಕನಿಗೆ ಸೊಂಕು ಧೃಢವಾಗಿದ್ದು ಮುಂಬೈಯಿಂದ ಆಗಮಿಸಿದ್ದಾನೆ. ಕೊಪ್ಪಳ ತಾಲ್ಲೂಕಿನ ಹಂದ್ರಾಳ ಗ್ರಾಮದ 25  ವರ್ಷದ ವ್ಯಕ್ತಿಗೆ ಸೊಂಕು ಧೃಢವಾಗಿದ್ದು, ಬಳ್ಳಾರಿಯ ಜೆಎಸ್‌ಡಬ್ಲ್ಯೂ ಕಂಪನಿಯಿಂದ ಆಗಮಿಸಿದ್ದಾನೆ.

ಮೈನಳ್ಳಿ ಗ್ರಾಮದ 40  ವರ್ಷದ ವ್ಯಕ್ತಿಗೆ ಸೊಂಕು ಧೃಢವಾಗಿದ್ದು, ಬಳ್ಳಾರಿಯಿಂದ ಆಗಮಿಸಿದ್ದಾನೆ. ಒಟ್ಟಾರೆ ಜಿಲ್ಲೆಯಲ್ಲಿ 80 ಕೊರೊನಾ ಕೇಸ್‌ಗಳ ಪೈಕಿ 20 ಜನ ಗುಣಮುಖರಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, 57 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments