Webdunia - Bharat's app for daily news and videos

Install App

ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ

Webdunia
ಗುರುವಾರ, 28 ಏಪ್ರಿಲ್ 2022 (11:42 IST)
ಲಸಿಕಾಕರಣ ಉತ್ತಮವಾಗಿದ್ದ ಕಾರಣ 3ನೇ ಅಲೆ ನಿಯಂತ್ರಣ ಸಾಧ್ಯವಾಯಿತು. ಹೀಗಾಗಿ ಈಗಲೂ ಲಸಿಕೆಗೆ ಹೆಚ್ಚು ಒತ್ತು ನೀಡಲಾಗುವುದು.
 
ಈಗಾಗಲೇ ಶೇ.98 ರಷ್ಟುಮಂದಿಗೆ ಲಸಿಕೆ ಹಾಕಲಾಗಿದೆ. 6ರಿಂದ 12 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಅನುಮತಿಸಿದೆ. ಹೀಗಾಗಿ ಎಲ್ಲಾ ವಯೋಮಾನದವರಿಗೂ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ ಏ.9ರ ಬಳಿಕವಷ್ಟೇ ಪಾಸಿಟಿವಿಟಿ ದರ ಹೆಚ್ಚಾಗಿದೆ. ಹೀಗಾಗಿ ಕೊರೋನಾ ಪ್ರಮಾಣ ಅರಿಯಲು ನಿತ್ಯ 10ರ ಬದಲಿಗೆ 30 ಸಾವಿರ ಪರೀಕ್ಷೆ ನಡೆಸಲಾಗುವುದು.

ಈ ಪೈಕಿ ಬೆಂಗಳೂರಿನಲ್ಲೇ 10 ಸಾವಿರ ಪರೀಕ್ಷೆ ನಡೆಸಲಾಗುವುದು. ಜತೆಗೆ ಎಲ್ಲಾ ಆಸ್ಪತ್ರೆಗಳಲ್ಲಿರುವ ರೋಗಿಗಳಿಗೆ ಪರೀಕ್ಷೆ ನಡೆಸಲಾಗುವುದು. ಅಲ್ಲಿ ಪಾಸಿಟಿವ್ ಬಂದ ರೋಗಿಯ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು. ರೂಪಾಂತರಿಗಳ ಬಗ್ಗೆ ಹೆಚ್ಚು ಗಮನ ನೀಡಲಾಗುವುದು ಎಂದರು.

ಜತೆಗೆ, ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ. ಶೇ.2 ರಷ್ಟುಮಂದಿಗೆ ರಾರಯಂಡಮ್ ಪರೀಕ್ಷೆ ನಡೆಸಲಾಗುತ್ತಿದೆ. ಅವರ ಟೆಲಿ ಟ್ರಾಕಿಂಗ್ ಕೂಡ ಮಾಡಲಾಗುತ್ತಿದೆ. ಆಸ್ಪ್ರೇಲಿಯಾ ಇಂಡೋನೇಷ್ಯಾ, ನ್ಯೂಜಿಲೆಂಡ್, ದಕ್ಷಿಣ ಕೊರಿಯಾ ಕಡೆಯಿಂದ ಬರುವವರ ಮೇಲೆ ಎಚ್ಚರಿಕೆ ವಹಿಸಲಾಗಿದೆ.

ರಾಜ್ಯದ ಗಡಿಗಳಲ್ಲಿ ಪರೀಕ್ಷೆ, ಅಗತ್ಯ ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ ಸೇರಿದಂತೆ ಕೊರೋನಾ ಎದುರಿಸಲು ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುವುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments