Webdunia - Bharat's app for daily news and videos

Install App

ಕೊರೊನಾ ವೈರಸ್ ; ಸರಕಾರದ ಆದೇಶ ಮೀರಿದರೆ ಜೈಲು ಸೇರೋದು ಪಕ್ಕಾ

Webdunia
ಮಂಗಳವಾರ, 24 ಮಾರ್ಚ್ 2020 (17:23 IST)
ಕೊರೊನಾ ವೈರಸ್ ನಿಯಂತ್ರಣಕ್ಕೆ ಕಾಲ ಕಾಲಕ್ಕೆ ಸರ್ಕಾರ ನೀಡುವ ಸೂಚನೆ ಆದೇಶಗಳನ್ನು ಪಾಲಿಸಬೇಕು. ಇಲ್ಲದೇ ಇದ್ದಲ್ಲಿ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಪಕ್ಕಾ ಅಂತ ಡಿಸಿ ಎಚ್ಚರಿಕೆ ನೀಡಿದ್ದಾರೆ.

ಕಾರವಾರ ನಗರಸಭಾ ವ್ಯಾಪ್ತಿಯಲ್ಲಿರುವ ವ್ಯಾಪಾರಸ್ಥರಿಗೆ ಕೊರೋನಾ ವೈರಸ್ (ಕೋವಿಡ್-19) ಹರಡದಂತೆ ಮುಂಜಾಗ್ರತೆಗಾಗಿ ಮಾರ್ಚ್ 31 ರ ವರೆಗೆ ರಾಜ್ಯ ಸರ್ಕಾರದ ವತಿಯಿಂದ ಜಿಲ್ಲೆಯಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಕೇವಲ ಜೀವನೋಪಾಯದ ಅತ್ಯಾವಶ್ಯಕ ವಸ್ತುಗಳು ಮಾತ್ರ ಮಾರಾಟಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಸೂಚಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ಜಾರಿಯಲ್ಲಿದ್ದು, ವ್ಯಾಪಾರಸ್ಥರು ಸಾಮಾಗ್ರಿಗಳ ದರಪಟ್ಟಿಯನ್ನು ಕಡ್ಡಾಯವಾಗಿ ಅಂಗಡಿಯ ಎದುರಿಗೆ ಸಾರ್ವಜನಿಕರಿಗೆ ಕಾಣುವಂತೆ ಪ್ರಕಟಿಸಬೇಕು. ವ್ಯಾಪಾರಸ್ಥರು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು.  ಅಂಗಡಿಗಳಲ್ಲಿ ಸೆನಿಟೈಜರ್ ಬಳಕೆ, ಗ್ರಾಹಕರಲ್ಲಿ ಕನಿಷ್ಟ ಒಂದು ಮೀಟರ್ ಅಂತರ ಕಾಯ್ದುಕೊಳ್ಳಬೇಕು ಎಂದಿದ್ದಾರೆ.

ಕೆಮ್ಮು, ನೆಗಡಿ, ಜ್ವರ ಬಂದಂತವರನ್ನು ಅಂಗಡಿಯಲ್ಲಿ ನಿಲ್ಲಿಸಿಕೊಳ್ಳದೇ ಆಸ್ಪತ್ರೆಗೆ ಹೋಗಲು ತಿಳಿಸಬೇಕು. ಕಾಲ ಕಾಲಕ್ಕೆ ಸರ್ಕಾರ ನೀಡುವ ಸೂಚನೆ ಆದೇಶಗಳನ್ನು ಪಾಲಿಸದೇ ಇದ್ದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments