Webdunia - Bharat's app for daily news and videos

Install App

ಕೊರೊನಾ ವಾರಿಯರ್ ಗೆ ತಗುಲಿದ ಕೊರೊನಾ

Webdunia
ಮಂಗಳವಾರ, 26 ಮೇ 2020 (15:57 IST)
ಮೊದಲ ಬಾರಿಗೆ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡಿನಲ್ಲಿ ಕಾರ್ಯನಿರ್ವಹಿಸಿರುವ ಆರೋಗ್ಯ ಸಿಬ್ಬಂದಿ ಕೊರೋನಾ ವಾರಿಯರ್ ಗೆ ಕೊರೊನಾ ಸೋಂಕು ತಗುಲಿದೆ.

ಬಳ್ಳಾರಿ ನಗರದ ಜಿಲ್ಲಾ ಕೋವಿಡ್ -19 ಆಸ್ಪತ್ರೆಯ ಐಸೊಲೇಷನ್ ವಾರ್ಡಿನಲ್ಲಿ ವೈದ್ಯರು, ನರ್ಸ್ ಗಳು ಸೇರಿ  15 ಜನ  14 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು.

ನಂತರ ಅವರನ್ನು ಪವನ್ ಹೊಟೇಲ್ ನಲ್ಲಿ  ಕ್ವಾರಂಟೈನ್ ಮಾಡಿತ್ತು. ಮನೆಗೆ ಕಳಿಸುವ ಮುನ್ನ  ಪರೀಕ್ಷೆ ಮಾಡಿದಾಗ ಅವರಲ್ಲಿ ಓರ್ವ ಪುರುಷ ನರ್ಸ್ ಗೆ ಪಾಸಿಟಿವ್ ಬಂದಿದೆ.

ಪಿಪಿಎ ಕಿಟ್ ಬಳಕೆ ಸೇರಿದಂತೆ ಎಲ್ಲಾ ರೀತಿ ಮುಂಜಾಗ್ರತಾ ಕ್ರಮ ತೆಗೆದು ಕೊಂಡರೂ  ಸೋಂಕು ತಗಲಿರುವ ಬಗ್ಗೆ ಪರಾಮರ್ಶೆ ಮಾಡಲಾಗುತ್ತಿದೆ ಎಂದು  ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದ್ದಾರೆ.

ಉಳಿದ 14 ಜನರಲ್ಲಿ ನೆಗೆಟಿವ್ ಬಂದಿದೆ. ಆದರೂ ಅವರಲ್ಲೂ ಆತಂಕ ಶುರು ಆಗಿದೆ. ಸೋಂಕಿತನೊಂದಿಗೆ ಹೆಚ್ಚಿಗೆ ಸಂಪರ್ಕ ಹೊಂದಿದ್ದ ಹತ್ತು‌ ಜನರನ್ನು ಮತ್ತೆ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಈ ಒಂದು ಹೊಸ ಪ್ರಕರಣದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37 ಕ್ಕೇರಿದೆ. 21 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.‌ಅವರಲ್ಲಿ ಕಂಪ್ಲಿಯ ಓರ್ವ ವ್ಯಕ್ತಿ ಗುಣ ಮುಖನಾಗಿದ್ದು ಇಂದು ಬಿಡುಗಡೆಯಾಗಲಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments