Webdunia - Bharat's app for daily news and videos

Install App

ಕೊರೊನಾ ವಾರಿಯರ್ ಗೆ ತಗುಲಿದ ಕೊರೊನಾ

Webdunia
ಮಂಗಳವಾರ, 26 ಮೇ 2020 (15:57 IST)
ಮೊದಲ ಬಾರಿಗೆ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡಿನಲ್ಲಿ ಕಾರ್ಯನಿರ್ವಹಿಸಿರುವ ಆರೋಗ್ಯ ಸಿಬ್ಬಂದಿ ಕೊರೋನಾ ವಾರಿಯರ್ ಗೆ ಕೊರೊನಾ ಸೋಂಕು ತಗುಲಿದೆ.

ಬಳ್ಳಾರಿ ನಗರದ ಜಿಲ್ಲಾ ಕೋವಿಡ್ -19 ಆಸ್ಪತ್ರೆಯ ಐಸೊಲೇಷನ್ ವಾರ್ಡಿನಲ್ಲಿ ವೈದ್ಯರು, ನರ್ಸ್ ಗಳು ಸೇರಿ  15 ಜನ  14 ದಿನಗಳ ಕಾಲ ಕಾರ್ಯ ನಿರ್ವಹಿಸಿದ್ದರು.

ನಂತರ ಅವರನ್ನು ಪವನ್ ಹೊಟೇಲ್ ನಲ್ಲಿ  ಕ್ವಾರಂಟೈನ್ ಮಾಡಿತ್ತು. ಮನೆಗೆ ಕಳಿಸುವ ಮುನ್ನ  ಪರೀಕ್ಷೆ ಮಾಡಿದಾಗ ಅವರಲ್ಲಿ ಓರ್ವ ಪುರುಷ ನರ್ಸ್ ಗೆ ಪಾಸಿಟಿವ್ ಬಂದಿದೆ.

ಪಿಪಿಎ ಕಿಟ್ ಬಳಕೆ ಸೇರಿದಂತೆ ಎಲ್ಲಾ ರೀತಿ ಮುಂಜಾಗ್ರತಾ ಕ್ರಮ ತೆಗೆದು ಕೊಂಡರೂ  ಸೋಂಕು ತಗಲಿರುವ ಬಗ್ಗೆ ಪರಾಮರ್ಶೆ ಮಾಡಲಾಗುತ್ತಿದೆ ಎಂದು  ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದ್ದಾರೆ.

ಉಳಿದ 14 ಜನರಲ್ಲಿ ನೆಗೆಟಿವ್ ಬಂದಿದೆ. ಆದರೂ ಅವರಲ್ಲೂ ಆತಂಕ ಶುರು ಆಗಿದೆ. ಸೋಂಕಿತನೊಂದಿಗೆ ಹೆಚ್ಚಿಗೆ ಸಂಪರ್ಕ ಹೊಂದಿದ್ದ ಹತ್ತು‌ ಜನರನ್ನು ಮತ್ತೆ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

ಈ ಒಂದು ಹೊಸ ಪ್ರಕರಣದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37 ಕ್ಕೇರಿದೆ. 21 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.‌ಅವರಲ್ಲಿ ಕಂಪ್ಲಿಯ ಓರ್ವ ವ್ಯಕ್ತಿ ಗುಣ ಮುಖನಾಗಿದ್ದು ಇಂದು ಬಿಡುಗಡೆಯಾಗಲಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

51 ಜನರ ಬದುಕಿಗೆ ಸರ್ಕಾರದ ನೆರವಿನ ʻಹಸ್ತʼ: ಡಿಕೆ ಶಿವಕುಮಾರ್

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ಗುಡ್ ನ್ಯೂಸ್ ಗ್ಯಾರಂಟಿ

ಮೋಟಾರ್ ಸೈಕಲ್‌ನಲ್ಲಿ ಐವರನ್ನು ಕೂರಿಸಿಕೊಂಡು ಸಾಹಸ, ವಿಡಿಯೋ ನೋಡಿ

ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್‌ ಪತ್ತೆ ಪ್ರಕರಣ: ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಪೊಲೀಸರಿಂದ ಫುಲ್‌ ಗ್ರೀಲ್‌

ಮುಂದಿನ ಸುದ್ದಿ
Show comments