Webdunia - Bharat's app for daily news and videos

Install App

ಕೊರೊನಾ ಆತಂಕ : ಹೊಸ ವರ್ಷದಲ್ಲಿ ದೇವಸ್ಥಾನಕ್ಕೆ ಭಕ್ತಸಾಗರ

Webdunia
ಸೋಮವಾರ, 2 ಜನವರಿ 2023 (14:30 IST)
ಬೆಂಗಳೂರು : ಹೊಸ ವರ್ಷ ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠ ಏಕಾದಶಿ. ಬೆಂಗಳೂರಿನ ದೇವಸ್ಥಾನಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ.

ಕಳೆದ 2 ವರ್ಷದಿಂದ ಕೊರೊನಾ ಹಿನ್ನೆಲೆ ವೈಕುಂಠ ಏಕಾದಶಿಯನ್ನ ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಇದೀಗ ಕೊಂಚ ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ನಡೆಯಲಿದೆ. ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ದಂಡೇ ಹರಿದು ಬರಲಿದೆ.

ಹೊಸ ವರ್ಷ ಹಿನ್ನೆಲೆ ನಿನ್ನೆ ವೈಯಾಲಿಕಾವಲ್ನ ಟಿಟಿಡಿ ದೇವಸ್ಥಾನಕ್ಕೆ 25 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ರು. ತಿರುಪತಿಯಿಂದ ಲಾಡು ಕಡಿಮೆ ಪ್ರಮಾಣದಲ್ಲಿ ಬಂದ ಹಿನ್ನೆಲೆ 10 ಸಾವಿರ ಲಾಡು ವಿತರಣೆ ಮಾಡಿದ್ರು.

ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಳಗ್ಗೆ 3 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತಾದಿಗಳಿಗೆ ಪಾಸ್ಗಳನ್ನು ವಿತರಿಸಲಾಗಿದೆ. 

ಬೆಳಗ್ಗೆ 3 ಗಂಟೆಯಿಂದ ಪೂಜೆಗಳು ನಡೆಯಲಿವೆ. ಸುಪ್ರಭಾತ ಸೇವೆ, ಅರ್ಚನ ಸೇವೆ, ದ್ವಾರ ಸೇವೆ ನಡೆಯುತ್ತವೆ. ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕರು ದರ್ಶನಕ್ಕೆ ಬರಬಹುದು. ರಾತ್ರಿ 11 ಗಂಟೆವರೆಗೂ ದರ್ಶನ ಇರುತ್ತದೆ. ಬೆಳಗ್ಗೆ ಮತ್ತು ಸಂಜೆ ಕಲ್ಯಾಣೋತ್ಸವ ಇರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ಮುಂದಿನ ಸುದ್ದಿ
Show comments