ಕೊರೊನಾ ಭೀತಿ : ಬೆಂಗಳೂರು, ಹೊರರಾಜ್ಯಗಳಿಗೆ ಖಾಸಗಿ ಬಸ್ ಸಂಚಾರ ಸ್ಥಗಿತ

Webdunia
ಬುಧವಾರ, 18 ಮಾರ್ಚ್ 2020 (19:16 IST)
ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರಗಿಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಡಿಸಿ ಮುಂದಾಗಿದ್ದಾರೆ.

ಕಲಬುರಗಿಯಿಂದ ಹೊರಹೋಗುವ ಮತ್ತು ಒಳಬರುವ ಎಲ್ಲಾ ಖಾಸಗಿ ಬಸ್‍ಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಖಾಸಗಿ ಟ್ರಾವೆಲರ್ಸ್ ಮತ್ತು ಬುಕ್ಕಿಂಗ್ ಏಜೆಂಟರ ಸಭೆಯಲ್ಲಿ  ಅವರು ಕಟ್ಟಪ್ಪಣೆ ಮಾಡಿದರು.

ರಾಜ್ಯದ ರಾಜಧಾನಿ ಬೆಂಗಳೂರು, ಇತರೆ ಜಿಲ್ಲೆಗಳು, ನೆರೆರಾಜ್ಯಗಳಾದ ಮಹಾರಾಷ್ಟ್ರ, ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಿಗೆ ತೆರಳುವ ಮತ್ತು ಜಿಲ್ಲೆಯೊಳಗೆ ಬರುವ ಬಸ್‍ಗಳ ಸಂಚಾರ ನಿಲ್ಲಿಸಬೇಕು. ಈಗಾಗಲೇ ಬುಕ್ಕಿಂಗ್ ಮಾಡಿರುವ ಸೀಟುಗಳ ಟಿಕೆಟ್ ಗಳನ್ನು ರದ್ದುಮಾಡುವಂತೆ ಬಸ್ ಮಾಲೀಕರು ಮತ್ತು ಏಜಂಟರಿಗೆ ಸೂಚನೆ ನೀಡಿದರು. ಮುಂದಿನ ಆದೇಶದವರೆಗೆ ಇದನ್ನು ಪಾಲಿಸಬೇಕೆಂದು ಅವರು ತಿಳಿಸಿದರು.

ಒಂದುವೇಳೆ, ಈ ಸೂಚನೆಯನ್ನು ಮೀರಿ ಬಸ್‍ಗಳ ಓಡಾಟ ನಡೆಸಿದಲ್ಲಿ, ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ 17 ಚೆಕ್ ಪೋಸ್ಟ್ ತೆರೆದಿದ್ದು, ಬಸ್ ಗಳ ಸಂಚಾರದ ಮೇಲೆ ನಿಗಾವಹಿಸಲಾಗುತ್ತದೆ ಎಂದರು.

ಇತ್ತೀಚೆಗೆ ಕೆಲವರು ಮುಂಬೈ, ಪುಣೆ, ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಇಳಿದು, ಬಸ್‍ಗಳ ಮೂಲಕ ಕಲಬುರಗಿ ಜಿಲ್ಲೆಗೆ ಬಂದಿರುತ್ತಾರೆ. ಹಾಗಾಗಿ ಇದುವರೆಗೆ ಕಲಬುರಗಿ ನಗರ ಮತ್ತು ಜಿಲ್ಲೆಗೆ ಬಂದಿರುವ ಪ್ರಯಾಣಿಕರ ಸಂಪೂರ್ಣ ವಿವರ ನೀಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಏಜೆಂಟರಿಗೆ ಸೂಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments