Select Your Language

Notifications

webdunia
webdunia
webdunia
webdunia

ಕೊರೊನಾ ಭೀತಿ : ಎಪಿಎಂಸಿಗೆ ಐವರು ಸಚಿವರು ದೌಡಾಯಿಸಿದ್ಯಾಕೆ?

ಕೊರೊನಾ ಭೀತಿ : ಎಪಿಎಂಸಿಗೆ ಐವರು ಸಚಿವರು ದೌಡಾಯಿಸಿದ್ಯಾಕೆ?
ಬೆಂಗಳೂರು , ಶುಕ್ರವಾರ, 3 ಏಪ್ರಿಲ್ 2020 (14:51 IST)
ಕೊರೊನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಐವರು ಸಚಿವರು ಒಟ್ಟಾಗಿಯೇ ಎಪಿಎಂಸಿಗೆ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಮತ್ತು ದಾಸನಪುರ ಮಾರುಕಟ್ಟೆ ಪ್ರಾಂಗಣಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ, ತೋಟಗಾರಿಕಾ ಸಚಿವ ನಾರಾಯಣ ಗೌಡ, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಎಸ್.ಆರ್ ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವ್ಯಾಪಾರಿಗಳು ಹಾಗೂ ರೈತರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದುಪ್ಪಟ್ಟು ಬೆಲೆಗೆ ಹಣ್ಣು, ತರಕಾರಿಗಳನ್ನು ವ್ಯಾಪಾರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಕೋವಿಡ್ -19 ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಸಹಕಾರ ನೀಡಬೇಕೆಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಎಫೆಕ್ಟ್ : ಪ್ರತಿಯೊಬ್ಬರಿಗೂ ನಿತ್ಯ 1 ಲೀಟರ್ ಉಚಿತ ಹಾಲು