Webdunia - Bharat's app for daily news and videos

Install App

ಕೊರೋನಾ ವೈರಸ್ : 13 ಜನ ಆಸ್ಪತ್ರೆಯಿಂದ ಬಿಡುಗಡೆ

Webdunia
ಭಾನುವಾರ, 10 ಮೇ 2020 (23:05 IST)
ಕೊರೊನಾ ಸೋಂಕಿನಿಂದ ಗುಣಮುಖರಾದ 13 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.

‌ ಕಲಬುರಗಿ ನಗರದ 12 ಮತ್ತು ಆಳಂದ ಪಟ್ಟಣದ 65 ವರ್ಷದ ವೃದ್ಧೆ ಸೇರಿದಂತೆ ಒಟ್ಟು 13 ಜನ ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ‌ ಸೋಂಕು ಪತ್ತೆಯಾದ ನಂತರ‌ ಪ್ರಥಮ ಬಾರಿಗೆ ಒಂದೇ‌ ದಿನ‌ ಇಷ್ಟೊಂದು ಗರಿಷ್ಠ ಪ್ರಮಾಣದಲ್ಲಿ ರೋಗಿಗಳು ಗುಣಮುಖರಾಗಿ‌ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ‌‌ ಪಟ್ಟಣದ 65 ವರ್ಷದ ವೃದ್ಧೆ (ರೋಗಿ ಸಂಖ್ಯೆ-502),ಕಲಬುರಗಿ ನಗರದ ಖಮರ್‌ ಕಾಲೋನಿಯ 7 ವರ್ಷದ ಬಾಲಕ‌(ರೋಗಿ ಸಂಖ್ಯೆ-503) ಮತ್ತು 40 ವರ್ಷದ ಯುವತಿ (ರೋಗಿ ಸಂಖ್ಯೆ-517) ಹಾಗೂ ಇಸ್ಲಾಮಾಬಾದ‌ ಕಾಲೋನಿಯ 43 ವರ್ಷದ ಪುರುಷ (ರೋಗಿ ಸಂಖ್ಯೆ-517) ಮತ್ತು 28 ವರ್ಷದ ಯುವತಿ (ರೋಗಿ ಸಂಖ್ಯೆ-518) ಗುಣಮುಖರಾಗಿದ್ದಾರೆ.

ಅದೇ‌ ರೀತಿ ಕಲಬುರಗಿಯ ಮೋಮಿನಪುರ ಪ್ರದೇಶದ 45 ವರ್ಷದ ಯುವತಿ (ರೋಗಿ ಸಂಖ್ಯೆ-519), 22 ವರ್ಷದ ಯುವತಿ (ರೋಗಿ ಸಂಖ್ಯೆ-520), 28 ವರ್ಷದ ಯುವಕ (ರೋಗಿ ಸಂಖ್ಯೆ-526), 14 ವರ್ಷದ ಬಾಲಕಿ (ರೋಗಿ ಸಂಖ್ಯೆ-527), 22 ವರ್ಷದ ಯುವಕ (ರೋಗಿ ಸಂಖ್ಯೆ-528), 20 ವರ್ಷದ ಯುವತಿ (ರೋಗಿ ಸಂಖ್ಯೆ-530), 17 ವರ್ಷದ ಬಾಲಕಿ (ರೋಗಿ ಸಂಖ್ಯೆ-531) ಹಾಗೂ 12 ವರ್ಷದ  ಬಾಲಕಿ (ರೋಗಿ ಸಂಖ್ಯೆ-532) ಕೊರೋನಾ ಸೋಂಕಿನ ವಿರುದ್ಧ ಹೋರಾಡಿ ಚೇತರಿಕೆ ಕಂಡವರಾಗಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಕೊರೋನಾ‌ ಪೀಡಿತ 71 ರೋಗಿಗಳಲ್ಲಿ 44 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. 6 ಜನ ನಿಧನ‌ರಾಗಿದ್ದು, ಉಳಿದಂತೆ 21 ರೋಗಿಗಳಿಗೆ ಚಿಕಿತ್ಸೆ‌ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments