ಕೊರೊನಾ ವೈರಸ್ : ತುರ್ತುಸಭೆ ನಡೆಸಿದ್ಯಾಕೆ?

Webdunia
ಬುಧವಾರ, 4 ಮಾರ್ಚ್ 2020 (21:35 IST)
ಮಾರಣಾಂತಿಕ ಕೊರೋನಾ ವೈರಸ್ ತ್ವರಿತವಾಗಿ ಹರಡುತ್ತಿದ್ದು, ಭಾರತದಲ್ಲೂ ಈ ವೈರಸ್ ಹರಡಿರುವ ಪ್ರಕರಣಗಳು ಪತ್ತೆಯಾಗುತ್ತಲೇ ಇವೆ. 


ಕಲಬುರಗಿ ಜಿಲ್ಲೆಯಲ್ಲಿ ವೈರಸ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ, ಯಾರೂ ಕೂಡ ಈ ಬಗ್ಗೆ ಆತಂಕಕ್ಕೊಳಗಾಗಬಾರದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್.ಬಿ. ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಧೈರ್ಯ ತುಂಬಿದ್ದಾರೆ.

ಸಾರ್ವಜನಿಕರು ಕೊರೋನಾ ವೈರಸ್ ಕುರಿತು ಹೆದರುವ ಅವಶ್ಯಕತೆ ಇಲ್ಲ. ಬದಲಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಸೀನುವಾಗ ಕರವಸ್ತ್ರವನ್ನು ಬಳಸಬೇಕು. ಮಾಸ್ಕ್ ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಕಣ್ಣು, ಮೂಗು, ಬಾಯಿಗೆ ಪದೇ ಪದೆ ಕೈಹಾಕಬಾರದು ಎಂದು ಹೇಳಿದ ಅವರು, ಆಗಾಗ ಕೈತೊಳೆಯುತ್ತಿರಬೇಕು. ನೆಗಡಿ, ಕೆಮ್ಮು, ಜ್ವರ ಇದ್ದಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು, ಸ್ವಯಂಕೃತವಾಗಿ ಮನೆಯಲ್ಲೇ ಚಿಕಿತ್ಸೆಗೆ ಮುಂದಾಗಬಾರದು ಎಂದು ಸಲಹೆ ನೀಡಿದರು.

ಜಿಲ್ಲೆಯಾದ್ಯಂತ ಕೊರೋನಾ ವೈರಸ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಈ ಕಾರ್ಯದಲ್ಲಿ ಮಾಧ್ಯಮದವರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಅವರು ಕೋರಿದರು.

ಜಿಲ್ಲೆಯ ಸಾರ್ವಜನಿಕರಲ್ಲಿ ಕರೋನಾ ವೈರಸ್ ಕುರಿತು ಕಳೆದ ಫೆಬ್ರುವರಿಯಲ್ಲಿ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಮಾಹಿತಿ ನೀಡಲಾಗಿತ್ತು. ಇದೀಗ ಜನನಿಬಿಡ ಪ್ರದೇಶಗಳಾದ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್‍ಗಳಲ್ಲಿ ಹಾಗೂ ರೇಡಿಯೋಗಳಲ್ಲಿ ಜಾಹಿರಾತು ನೀಡುವ ಮೂಲಕ ವೈರಸ್ ಹರಡುವ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಸೋಂಕಿತರಿಗಾಗಿ ಪ್ರತ್ಯೇಕ 5 ಹಾಸಿಗೆಗಳ ವಾರ್ಡ್, ಇಎಸ್‍ಐ ಆಸ್ಪತ್ರೆಯಲ್ಲಿ 6 ಪ್ರತ್ಯೇಕ ಬೆಡ್, ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಯಲ್ಲಿ 2 ಹಾಸಿಗೆಯ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ 6 ತಂಡಗಳನ್ನು ನೇಮಿಸಲಾಗಿದೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯೂ ಇಯರ್, ಈ ವರ್ಷ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟದಲ್ಲಿ ಭರ್ಜರಿ ಆದಾಯ

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು: ಎಸ್ ಆರ್ ವಿಶ್ವನಾಥ್

ಭಾರತ, ಪಾಕಿಸ್ತಾನ ವಶದಲ್ಲಿರುವ ಕೈದಿಗಳ, ಮೀನುಗಾರರ ಪಟ್ಟಿ ವಿನಿಮಯ

ಸ್ವಿಟ್ಜರ್ಲೆಂಡ್‌ನ: ಬಾರ್ ಬೆಂಕಿ ಅವಘಡದಲ್ಲಿ 100ಕ್ಕೂ ಅಧಿಕ ಮಂದಿಗೆ ಗಾಯ,‌ ಹೆಚ್ಚುತ್ತಲೇ ಇದೆ

ವರುಣನ ಆಗಮನದೊಂದಿಗೆ ಮೊದಲ ವರ್ಷವನ್ನು ಸ್ವಾಗತಿದ ಮುಂಬೈ

ಮುಂದಿನ ಸುದ್ದಿ
Show comments