Publish Date: Sat, 29 May 2021 (12:14 IST)
Updated Date: Sat, 29 May 2021 (12:23 IST)
ಮೈಸೂರು : ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ತಗ್ಗಿದ್ರೂ, ಮೈಸೂರಿನಲ್ಲಿ ಹೆಚ್ಚಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಜಿಲ್ಲಾಡಳಿತ ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ನೀಡಬೇಕು. ಸೋಂಕಿತರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕರೆತರಬೇಕು ಎಂದು ಅವರು ಸಲಹೆ ನೀಡಿದ್ದಾರೆ.