Webdunia - Bharat's app for daily news and videos

Install App

ಕೊರೋನಾ ಅಪಾಯ: ಇನ್ನೂ 40 ಕೋಟಿ ಜನ ಸೋಂಕಿನ ಅಪಾಯದಲ್ಲಿ!

Webdunia
ಬುಧವಾರ, 21 ಜುಲೈ 2021 (11:36 IST)
ನವದೆಹಲಿ(ಜು.21): ದೇಶಾದ್ಯಂತ ಸೋಂಕಿನ ಪ್ರಮಾಣ ದಾಖಲೆಯ ಪ್ರಮಾಣದಲ್ಲಿ ಇಳಿದಿರುವ ಹೊತ್ತಿನಲ್ಲೇ, ದೇಶದಲ್ಲಿನ 6 ವರ್ಷ ಮೇಲ್ಪಟ್ಟಶೇ.67.6ರಷ್ಟುಜನರಲ್ಲಿ ಕೋವಿಡ್ ಪ್ರತಿಕಾಯಗಳು ಕಂಡುಬಂದಿವೆ. ಆದರೆ ಇನ್ನೂ 40 ಕೋಟಿ ಜನರು ಇದರ ವ್ಯಾಪ್ತಿಯಿಂದ ಹೊರಗಿರುವ ಕಾರಣ, ಅವರ ಎಚ್ಚರವಾಗಿರಬೇಕಾದ ಅಗತ್ಯವಿದೆ. ಈ ಹಂತದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಐಸಿಎಂಆರ್ ಸಮೀಕ್ಷೆ ಹೇಳಿದೆ.
* ದೇಶದ ಶೇ.68ರಷ್ಟು ಜನರಲ್ಲಿ ಕೊರೋನಾ ಪ್ರತಿಕಾಯ ಪತ್ತೆ
* ಇನ್ನೂ 40 ಕೋಟಿ ಆತಂಕ
* ಹೀಗಾಗಿ ಇನ್ನೂ 40 ಕೋಟಿ ಜನ ಸೋಂಕಿನ ಅಪಾಯದಲ್ಲಿ

ಜೂನ್ ಮತ್ತು ಜುಲೈ ತಿಂಗಳಲ್ಲಿ ಐಸಿಎಂಆರ್ ದೇಶದ 21 ರಾಜ್ಯಗಳ 70 ಜಿಲ್ಲೆಗಳ 28975 ಜನರನ್ನು ಸೆರೋಸರ್ವೇ (ರಕ್ತದಲ್ಲಿನ ಸೋಂಕಿನ ಅಂಶ ಪತ್ತೆ)ಗೆ ಒಳಪಡಿಸಿತ್ತು. ಇದನ್ನು ದೇಶವ್ಯಾಪಿ ಆಧರಿಸಿ ನೋಡಿದಾಗ, ಒಟ್ಟು ಜನಸಂಖ್ಯೆಯ ಶೇ.67.6ರಷ್ಟುಜನರಲ್ಲಿ ಸೋಂಕು ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದು ಕಂಡುಬಂದಿದೆ. ಆದರೆ ಈ ವ್ಯಾಪ್ತಿಯಿಂದ ಹೊರಗಿರುವ 40 ಕೋಟಿ ಜನರಿಗೆ ಸೋಂಕಿನ ಅಪಾಯ ಇದ್ದೇ ಇದೆ. ಹೀಗಾಗಿ ಅವರೆಲ್ಲಾ ಎಚ್ಚರದಿಂದ ಇರಬೇಕು. ಕೋವಿಡ್ ಇನ್ನೂ ಹೋಗದಿರುವುದರಿಂದ ಯಾವುದೇ ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಾರಂಭಗಳು ಹಾಗೂ ಅನಗತ್ಯ ಪ್ರಯಾಣಗಳನ್ನು ಸ್ಥಗಿತಗೊಳಿಸಬೇಕು. ಸಂಪೂರ್ಣ ಲಸಿಕೆ ಪಡೆದಿದ್ದರೆ ಮಾತ್ರ ಪ್ರಯಾಣ ಮಾಡಿ ಎಂದು ಸಮೀಕ್ಷಾ ವರದಿ ಹೇಳಿದೆ.
ಇದೇ ವೇಳೆ ಈ ಪೈಕಿ 85 ಶೇ. ಆರೋಗ್ಯ ಕಾರ್ಯಕರ್ತರಲ್ಲಿ ಕೋವಿಡ್ ಪ್ರತಿಕಾಯಗಳು ಪತ್ತೆಯಾಗಿದೆ. ಜೊತೆಗೆ ಆರೋಗ್ಯ ಕಾರ್ಯಕರ್ತರಲ್ಲಿ ಮೂರನೇ ಒಂದರಷ್ಟುಮಂದಿ ಇನ್ನೂ ಲಸಿಕೆ ಪಡೆದುಕೊಂಡಿಲ್ಲ ಎಂದು ವರದಿ ಹೇಳಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments