BIG NEWS ಕೊರೋನ ವೈರಸ್: ಮೂರನೇ ಹಂತದ ಹೋರಾಟಕ್ಕೆ ಸಜ್ಜಾಗಿ ಎಂದ ರಾಜ್ಯ ಸರಕಾರ

Webdunia
ಭಾನುವಾರ, 29 ಮಾರ್ಚ್ 2020 (19:36 IST)
ಕೊರೋನಾ ಮೂರನೇ ಹಂತದ ಹೋರಾಟವನ್ನು ಸಮರ್ಥವಾಗಿ ಎದುರಿಸಲು ನಾವೆಲ್ಲ ಸಜ್ಜಾಗಬೇಕಿದೆ ಎಂದು ಸರಕಾರ ಹೇಳಿದೆ.

ಕೊರೋನಾ ಮೂರನೇ ಹಂತದ ಹೋರಾಟವನ್ನು ಸಮರ್ಥವಾಗಿ ಎದುರಿಸಲು ನಾವೆಲ್ಲ ಸಜ್ಜಾಗಬೇಕಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಮತ್ತು ಲೋಕೋಪಯೋಗಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಗೆ ಬೇಕಾಗಿರುವ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ, ವೈದ್ಯಕೀಯ ಉಪಕರಣಗಳು, ಮೆಡಿಸಿನ್‍ಗಳ ಬಗ್ಗೆ ಪಟ್ಟಿ ಮಾಡಿ ಬೆಂಗಳೂರಿನಲ್ಲಿ ಸ್ಥಾಪಿಸಿರುವ ಕೊರೋನಾ ವಾರ್ ರೂಂಗೆ ಕಳುಹಿಸಿದಲ್ಲಿ ಸರಬರಾಜಿಗೆ ಕ್ರಮ ವಹಿಸಲಾಗುತ್ತದೆ. ವಾರ್ ರೂಂನಲ್ಲಿ ಖುದ್ದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಇದರ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ 40 ವೆಂಟಿಲೇಟರ್‍ಗಳಿದ್ದು, ಇದು ಸಾಕಾಗುವುದಿಲ್ಲ. ಮಹಿಂದ್ರಾ ಕಂಪನಿಯವರು 7500 ರೂ. ಬೆಲೆಯಲ್ಲಿ ವೆಂಟಿಲೇಟರ್ ತಯಾರಿಸಿ ಕೊಡಲು ಮುಂದೆ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಇಂತಹ 100 ವೆಂಟಿಲೇಟರ್ ಖರೀದಿಸಬೇಕು ಎಂದು ಡಿ.ಸಿ. ಶರತ್ ಬಿ. ಅವರಿಗೆ ಡಿ.ಸಿ.ಎಂ ನಿರ್ದೇಶನ ನೀಡಿದರು.

ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ಅದೇ ರೀತಿ ಗ್ರಾಮಗಳಲ್ಲಿ ಪಿ.ಡಿ.ಒ.ಗಳು ಕೇಂದ್ರಸ್ಥಾನದಲ್ಲಿದ್ದು, ಸೇವೆಗೆ ಸದಾ ಸಿದ್ಧರಿರಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments