Webdunia - Bharat's app for daily news and videos

Install App

ಕೊರೋನಾ ವೈರಸ್ : ಮನೆಯಿಂದ ಹೊರಗೆ ಕಾಲು ಇಡಬೇಡಿ - ಖಡಕ್ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

Webdunia
ಶನಿವಾರ, 14 ಮಾರ್ಚ್ 2020 (18:38 IST)
ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಅನಗತ್ಯ ಮನೆಯಿಂದ ಹೊರಗಡೆ ತಿರುಗಾಡುವುದಾಗಲಿ ಅಥವಾ ದೂರದ ಊರುಗಳಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವಾರ್ತಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅನಗತ್ಯ ಪ್ರಯಾಣಗಳಿಗೆ ಬ್ರೆಕ್ ಹಾಕಲು ಜಿಲ್ಲೆಯೊಳಗಿನ ಸಾರಿಗೆ ಸೇವೆ ಕನಿಷ್ಠ ಗೊಳಿಸಲಾಗುವುದು ಎಂದರು.

ಸಾರ್ವಜನಿಕರು “ಕೊರೋನಾ ವೈರಸ್” ಕುರಿತು ಭಯಭೀತರಾಗುವ ಅವಶ್ಯಕತೆ ಇಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಅನಿವಾರ್ಯ. “ಕೊರೋನಾ ವೈರಸ್” ಕೇವಲ ಗಾಳಿಯಿಂದ ಹರಡುವ ರೋಗವಲ್ಲ, ಇದು ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಸೊಂಕು ತಗಲುತ್ತದೆ.

ವಿದೇಶದಿಂದ ಮರಳಿರುವ ವ್ಯಕ್ತಿ, ಆ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿರುವ ಹಾಗೂ ಕೊರೋನಾ ವೈರಸ್ ಲಕ್ಷಣ ಹೊಂದಿರುವವರನ್ನು ಮಾತ್ರ ಕೊರೋನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಡಿ.ಸಿ. ಶರತ್ ಬಿ. ಮಾಹಿತಿ ನೀಡಿದರು.

ಕೊರೋನಾ ವೈರಸ್ ಕುರಿತಂತೆ ಸಾರ್ವಜನಿಕರಲ್ಲಿ ಮನೆಮಾಡಿರುವ ಭಯದ ವಾತಾವರಣ ತಿಳಿಗೊಳಿಸಲು ಮತ್ತು ಸೊಂಕಿನ ಬಗ್ಗೆ ಅಗತ್ಯ ಮಾಹಿತಿ ಪಡೆಯಲು ಕೂಡಲೆ ಹೆಲ್ಪ್‍ಲೈನ್ ಸೆಂಟರ್ ಪ್ರಾರಂಭಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು ವಿದೇಶದಿಂದ ಜಿಲ್ಲೆಗೆ ಮರಳಿದ ಎಲ್ಲರು ಸಮಾಜದ ಸ್ವಾಸ್ಥ ಹಿತದೃಷ್ಠಿಯಿಂದ ಕೂಡಲೆ ಸ್ವಯಂಪ್ರೇರಿತರಾಗಿ ಚಿಕಿತ್ಸೆಗೆ ಒಳಪಡಿಸಿಕೊಳ್ಳಬೇಕು ಸೂಚನೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

ಮುಂದಿನ ಸುದ್ದಿ
Show comments