ಬೆಂಗಳೂರು : ಕರ್ನಾಟಕಕ್ಕೂ ರೂಪಾಂತರಿ ಕೊರೊನಾ ವೈರಸ್ ಆತಂಕ ಹೆಚ್ಚಾಗಿದ್ದು, ನಿಯಂತ್ರಣಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಅಧಿಕಾರಿಗಳು, ತಜ್ಞರ ಸಭೆಯನ್ನು ಶನಿವಾರ ನಡೆಸಲಾಯಿತು.
ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಆರ್. ಅಶೋಕ್, ಸಭೆಯಲ್ಲಿ ಹೊಸ ತಳಿಯ ಕೊರೊನಾ ಕುರಿತು ಮಾತುಕತೆ ನಡೆಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ.