Webdunia - Bharat's app for daily news and videos

Install App

ಕೆಲವು ನಾಯಿಗಳು ಬರ್ತಾವೇ ಬಿಸ್ಕಿಟ್ ಹಾಕಿ: ಭ್ರಷ್ಟ ಗುತ್ತಿಗೆದಾರನಿಗೆ ಭ್ರಷ್ಟ ತಹಶೀಲ್ದಾರ್‌ನ ಸಲಹೆ

Webdunia
ಮಂಗಳವಾರ, 31 ಮೇ 2016 (14:23 IST)
ಕೆಲವು ನಾಯಿಗಳು ಬರ್ತಾವೇ ಬಿಸ್ಕೆಟ್ ಹಾಕಿ ನೀರು ಕುಡಿಸಿ ಎಂದು ಗುತ್ತಿಗೆದಾರನೊಬ್ಬನಿಗೆ ತಹಶೀಲ್ದಾರರು ಸೂಚನೆ ನೀಡಿರುವ ಘಟನೆ ರಾಯಚೂರಿನ ಬರೋಲಿ ಗ್ರಾಮದಲ್ಲಿ ನಡೆದಿದೆ.
 
ದೇವಸ್ಥಾನದಲ್ಲಿ ತೆಂಗಿನ ಕಾಯಿ ಮಾರಾಟ ಮಾಡುವ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ಹೆಚ್ಚಿನ ಹಣಕ್ಕೆ ತೆಂಗಿನಕಾಯಿಗಳನ್ನು ಮಾರಾಟ ಮಾಡುತ್ತಿದ್ದ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಗ್ರಾಮಸ್ಥರು, ತಹಶೀಲ್ದಾರ್ ಎಸ್‌.ಟಿ.ಪುರೆ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ದೂರು ನೀಡಿ, ಗುತ್ತಿಗೆದಾರನಿಗೆ ಬುದ್ದಿ ಹೇಳಿ ಎಂದು ಭಕ್ತರೊಬ್ಬರು ತಮ್ಮ ಮೊಬೈಲ್‌ನ್ನು ಗುತ್ತಿಗೆದಾರನ ಬಳಿ ನೀಡಿದ್ದಾರೆ.
 
ತಹಶೀಲ್ದಾರರು ಗುತ್ತಿಗೆದಾರನ ಜೊತೆ ಪೋನಿನಲ್ಲಿ ಮಾತನಾಡಿ ಡೈರೆಕ್ಟ್ ಆಗಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಡ, ಕೆಲವು ನಾಯಿಗಳು ಬರ್ತಾವೆ, ಬಿಸ್ಕಿಟ್ ಹಾಕಿ ನೀರು ಕುಡಿಸಿ ಎಂದು ಗುತ್ತಿಗೆದಾರನ ಪರವಹಿಸಿ ಮಾತನಾಡಿ ಅನಾಗರಿಕತೆಯನ್ನು ಮೆರೆದಿದ್ದಾರೆ. 
 
ತಹಶೀಲ್ದಾರ ಮತ್ತು ಗುತ್ತಿಗೆದಾರನ ಸಂಭಾಷಣೆ ಭಕ್ತರ ಮೊಬೈಲ್ ಪೋನ್‌ನಲ್ಲಿ ರೆಕಾರ್ಡ್ ಆಗಿದೆ. ಈ ಸಂಭಾಷಣೆಯ ವಿವರಗಳನ್ನು ತೆಗೆದುಕೊಂಡು ಭಕ್ತಾಧಿಗಳು ರಾಯಚೂರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments