Webdunia - Bharat's app for daily news and videos

Install App

ಬಿಎಸ್‌ವೈ ಭ್ರಷ್ಟಾಚಾರ ಮಾಡಿದ್ರು ಕ್ಲೀನ್ ಚಿಟ್: ಜಿ.ಪರಮೇಶ್ವರ್

Webdunia
ಗುರುವಾರ, 27 ಅಕ್ಟೋಬರ್ 2016 (15:54 IST)
ಬಿಎಸ್‌ವೈ ಭ್ರಷ್ಟಾಚಾರ ಮಾಡಿದ್ರು, ಆದರೂ ಸಹ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಅವರು 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದಿಂದ ಸಾರ್ಥಕ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. 
 
ಈ ವೇಳೆ ಮಾತನಾಡಿದ ಅವರು, ಕಿಕ್ ಬ್ಯಾಕ್ ಪ್ರಕರಣದಲ್ಲಿ ನ್ಯಾಯಾಲಯ ನಿಮಗೆ ಕ್ಲೀನ್ ಚಿಟ್ ನೀಡಿರಬಹುದು. ಆದರೆ, ನಿಮ್ಮ ಅಕೌಂಟ್‌ಗೆ ಬಂದ ಹಣ ಯಾವ ಮೂಲದ್ದಾಗಿದೆ ? ಪ್ರಜಾಪ್ರಭುತ್ವವನ್ನು ಗಾಳಿಗೆ ತೂರಿದ್ದೀರಾ. ಇದು ಒಬ್ಬ ಯಡಿಯೂರಪ್ಪನ ವಿಚಾರವಲ್ಲ.ಬಿಜೆಪಿಯಲ್ಲಿ ಇಂತಹ ಭ್ರಷ್ಟರಿರುವುದರಿಂದ  ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಅವಕಾಶ ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಈಗಾಗಲೇ 150 ಸೀಟ್‌ಗಳನ್ನು ಗೆಲ್ಲುವ ಮೂಲಕ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಎಸ್‌ವೈ ಹೇಳುತ್ತಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ಸಚಿವ ಸ್ಥಾನವು ಹಂಚಿಕೆಯಾಗಿದೆ ಎಂದು ಆರೋಪಿಸಿದರು.
 
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರಸ್ ಪಕ್ಷವನ್ನು ಆಡಳಿತಕ್ಕೆ ತರಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು. 
 
ಅದೃಷ್ಟದಿಂದ ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ ಎಂದು ಕೆಲವರು ಮಾತಾನಾಡುತ್ತಿದ್ದಾರೆ. ಆದರೆ, ನಾನು ಕಷ್ಟು ಪಟ್ಟು ಈ ಮಟ್ಟಕ್ಕೆ ಬೆಳದಿದ್ದೇನೆ. 30 ವರ್ಷಗಳಿಂದ ಕೆಪಿಸಿಸಿಯಲ್ಲಿ ಪದಾಧಿಕಾರಿಯಾಗಿದ್ದೇನೆ ಎಂದು ವಿರೋಧಿಗಳಿಗೆ ಟಾಂಗ್ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments