ಹೆಸ್ಕಾಂ ಅಧಿಕಾರಿಗಳಿಂದ ಭ್ರಷ್ಟಾಚಾರ: ರೈತರ ಆಕ್ರೋಶ

Webdunia
ಗುರುವಾರ, 29 ನವೆಂಬರ್ 2018 (16:35 IST)
ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮ ಮಾಡುವ ಯೋಜನೆಯಲ್ಲಿ ಹೆಸ್ಕಾಂ ಅಧಿಕಾರಿಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ರೈತರಿಂದ ಹಣ ಸುಲಿಗೆ ಮಾಡಲಾಗುತ್ತಿದೆ. ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಬೇಕು. ಅರ್ಜಿ ಪ್ರತಿಗೆ 55 ರೂಪಾಯಿ ದರ ಇಲಾಖೆ ನಿಗದಿ ಮಾಡಿದೆ. ಆದರೆ ಆ ಅರ್ಜಿಗೆ 700 ರಿಂದ 4 ಸಾವಿರ ವರೆಗೆ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ.

ಏಜೆಂಟರ ಮೂಲಕ ಹಣ ಸುಲಿಗೆ ಮಾಡುತ್ತಿರುವ ಸಿಂದಗಿ ಹೆಸ್ಕಾಂ ಎಇಇ ಚಂದ್ರಕಾಂತ ನಾಯಕ್ ಹಾಗೂ ಅಧಿಕಾರಿ ಸಪ್ನಾ ಪಾಟೀಲ್ ರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಂದಗಿ ತಾಲೂಕಿನ ನದಿ-ಕೆನಲ್ ಹಾಗೂ ಬಾವಿಗಳಿಂದ ಆರ್.ಆರ್ ನಂಬರ್ ಇಲ್ಲದೇ ಸಾವಿರಾರು ರೈತರು ಅಕ್ರಮ ಪಂಪ್ ಸೆಟ್ ಬಳಿಕೆ ಮಾಡ್ತಿದ್ರು. ಅಕ್ರಮ ಪಂಪ್ ಸೆಟ್ ಗೆ ಸಕ್ರಮ ಗೊಳಿಸಲು ಸರ್ಕಾರ 30-11-2018 ರವರೆಗೆ ರೈತರಿಗೆ ಅವಕಾಶ ನೀಡಿದೆ. ಇದೀಗ 55 ರೂಪಾಯಿ ಅರ್ಜಿಗೆ 4 ಸಾವಿರವರೆಗೆ ಹಣವನ್ನು ಅಧಿಕಾರಿಗಳು ಸುಲಿಗೆ ಮಾಡುತ್ತಿದ್ದಾರೆ. ಏಜೆಂಟ್ ಮೂಲಕ ರೈತರಿಂದ ಹಣ ಸುಲಿಗೆ ಮಾಡ್ತಿರೊ ವಿಡಿಯೋವನ್ನು ರೈತರು ಮಾಡಿದ್ದಾರೆ.

ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಗೊಂಡ ರೈತರು, ಹೆಸ್ಕಾಂ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments