Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರ ಪ್ರಕರಣ: ಭಾಸ್ಕರ ರಾವ್‌ಗೆ ಷರತ್ತು ಬದ್ಧ ಜಾಮೀನು

ಭ್ರಷ್ಟಾಚಾರ
ಬೆಂಗಳೂರು , ಶನಿವಾರ, 28 ಜನವರಿ 2017 (12:33 IST)
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾ.ವೈ.ಭಾಸ್ಕರ ರಾವ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ
ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಹಾಗೂ ಸಾಕ್ಷಿ ನಾಶಪಡಿಸದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತು ವಿಧಿಸಿ ಮಾಜಿ ಲೋಕಾಯುಕ್ತ ನ್ಯಾ.ವೈ.ಭಾಸ್ಕರ ರಾವ್‌ಗೆ ಜಾಮೀನು ನೀಡಿದೆ. 
 
ಅನಾರೋಗ್ಯದ ಕಾರಣ ಇಂದು ನ್ಯಾ.ವೈ.ಭಾಸ್ಕರ ರಾವ್‌ ನ್ಯಾಯಲಯಕ್ಕೆ ಹಾಜರಾಗಿರಲಿಲ್ಲ. ಆದರೆ, ನ್ಯಾಯಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. 
 
ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ಎಸ್‌ಐಟಿ ತಂಡವನ್ನು ರಚಿಸಿದ್ದು, ಎಸ್‌ಐಟಿ ಅಧಿಕಾರಿಗಳು ನ್ಯಾ.ವೈ.ಭಾಸ್ಕರ ರಾವ್‌ ವಿರುದ್ಧ ಚಾರ್ಚ್‌ಶೀಟ್ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಾರುಕಟ್ಟೆಗೆ ಬರಲಿದೆ ಕೃತಕ ಕಿಡ್ನಿ